ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2021-22ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2021-22” ಪ್ರಶಸ್ತಿಯನ್ನು ದಿನಾಂಕ 05.08.2022 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2021-22ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಬಿ. ನಿರಂಜನ್, ಶ್ರೀ ಎಂ. ವಾದಿರಾಜ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ರಾಜೇಶ್ ರಾವ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಜೈರಾಜ್ ಬಿ. ರೈ, ಶ್ರೀ ಕೆ. ಹರಿಶ್ಚಂದ್ರ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ) ಶ್ರೀ ರವೀಂದ್ರ ಬಿ., ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾದ ಶ್ರೀ ಬಿ. ಪ್ರಸಾದ್‌ಕೌಶಲ್ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತ್ತರರು ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ರಮನಾಥ್ ಸನಿಲ್ ಮತ್ತು ಶ್ರೀ ಗೋಪಾಲ್ ಎಮ್. ಉಪಸ್ಥಿತರಿದ್ದರು.