ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೆöÊಮ್ ಬ್ರಾಂಚ್ನ ಪರಶುರಾಮ್ ರವರು ಇತ್ತೀಚಿನ ದಿನಗಳಲ್ಲಿ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅಧಿಕವಾಗುತ್ತಿರುವ ಸೈಬರ್ ಅಪರಾಧದ ಬಗ್ಗೆ ಜಾಗೃತಿ ವಹಿಸುವಂತೆ ಹಾಗೂ ಗ್ರಾಹಕರಿಗೆ ಯಾವ ರೀತಿ ಮುನ್ನೆಚರಿಕೆಯನ್ನು ನೀಡಬೇಕು ಎಂಬ ವಿಷಯದ ಬಗ್ಗೆ ಮಾಹಿತಿಗಳನ್ನು ತಿಳಿಸಿದರು.
ಮೂಲ್ಕಿ ಪೋಲಿಸ್ ಠಾಣೆಯ ಮಹಿಳಾ ಪೋಲಿಸ್ ಸಬ್ಇನ್ಸ್ಪೆಕ್ಟರ್ ಶ್ರೀಮತಿ ಅನಿತಾ ಕೆ., ಯವರು ಮಾತನಾಡಿ, ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವಕಾಶವನ್ನು ನೀಡಿ ಅತ್ಯುತ್ತಮವಾಗಿ ಕಾರ್ಯನೀರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಹಲವಾರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಮಹಿಳೆಯರು ಅಪರಾಧಗಳ ಬಗ್ಗೆಯೂ ಜಾಗೃತಿ ವಹಿಸಬೇಕು. ಯಾವುದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸೇವೆಗಳು ಅಗತ್ಯವಿದ್ದಲ್ಲಿ, ಬಿಟ್ ಪೊಲೀಸ್ಗೆ ಮಾಹಿತಿಯನ್ನು ನೀಡಿ ತಮ್ಮ ದೂರುಗಳನ್ನು ಸಲ್ಲಿಸುವಂತೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಪೊಲಬು” ಎಂಬ ಹೆಸರಿನಿಂದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ನಮ್ಮ ಸಿಬ್ಬಂದಿಗಳು ಅವರ ಮನೆಯಲ್ಲಿ ತಯಾರು ಮಾಡಿದ ರುಚಿ ರುಚಿಯಾದ ತುಳುನಾಡಿನ ಆಟಿ ತಿಂಗಳಿನ ವಿವಿಧ ತಿಂಡಿ ತಿನಿಸುಗಳು, ಭಕ್ಷ ಭೋಜನಗಳನ್ನು ತಂದಿರುತ್ತಾರೆ. ಅಲ್ಲದೇ ಈ ಬಾರಿಯ ವೇದಿಕೆಯನ್ನು ಆಟಿ ತಿಂಗಳ ಮಹತ್ವವನ್ನು ಸಾರುವ ವಿಷಯವನ್ನು ಅಳವಡಿಸಿ ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿದೆ. ಆತ್ಮಶಕ್ತಿ ಎಂಬುದು ಒಂದು ಕುಟುಂಬ ಇದ್ದ ಹಾಗೆ, ಇಲ್ಲಿಯ ಸಿಬ್ಬಂದಿಗಳು ಇಲ್ಲಿಯ ಕೆಲಸವನ್ನು ತನ್ನ ಸ್ವಂತ ಕುಟುಂಬದ ಕೆಲಸ ಎನ್ನುವ ಹಾಗೆ ಮಾಡುತ್ತಾ ಇದ್ದು, ಈ ಆಟಿದ ಕೂಟದಲ್ಲಿ ಭಾಗವಹಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಅವರ ಮನೆಯವರಿಗೆ ಧನ್ಯವಾದಗಳನ್ನು ಸಮರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೋಲಿಸ್ ಸಬ್ಇನ್ಸ್ಪೆಕ್ಟರ್ ಶ್ರೀ ಸತೀಶ್ ಕೆ., ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀಯುತ ವಾಮನ್ ಕೆ, ಸಂಘದ ಉಪಾಧ್ಯಕ್ಷರಾದ ಶ್ರೀಯುತ ನೇಮಿರಾಜ್ ಪಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತ್ತರರರು ಉಪಸ್ಥಿತರಿದ್ದರು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೆöÊಮ್ ಬ್ರಾಂಚ್ನ ಶ್ರೀ ನಟರಾಜ್, ಶ್ರೀ ಯುವರಾಜ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಶ್ರೀ ಪರಮೇಶ್ವರ ಜಿ. ಪೂಜಾರಿ, ಶ್ರೀ ಆನಂದ್ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ದಿವಾಕರ್ ಬಿ.ಪಿ , ಶ್ರೀ ಗೋಪಾಲ್ ಎಮ್, , ಸಲಹೆಗಾರ ಶ್ರೀ ಅಶೋಕ್ ಕುಮಾರ್, ಹಿರಿಯ ಗ್ರಾಹಕರಾದ ಶ್ರೀಮತಿ ಸುಲತಾ ತಲ್ವಾರ್ ಮತ್ತಿತರರು ಭಾಗವಹಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಧನಲಕ್ಷಿ ಕಾರ್ಯಕ್ರಮ ನಿರೂಪಿಸಿದರು.
