ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ರೈ ಇವರು ಮಾತನಾಡಿ ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಶ್ರೀಮತಿ ಲವೀನ ಪಿಂಟೋ ಇವರು ಮಾತನಾಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.
ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯರಾದ ಡಾ|| ಆಶಿತ್ ಎಮ್. ವಿ. ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರ ವಲ್ಲದೆ ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್ , ದೇರಳಕಟ್ಟೆ ಇದರ ವೈದ್ಯರಾದ ಡಾ|| ಜೈನುದ್ದೀನ್ ಇವರು ಮಾತನಾಡಿ ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ , ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು 15000 ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ 33ನೇ ಶಾಖೆಯು ಜುಲೈ 15ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಂ, ಶ್ರೀಮತಿ ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಶ್ರೀ ಅಜಿತ್ ಪಾಲೇರಿ , ಜೇಸಿಐ ವಲಯ ನಿರ್ದೇಶಕರಾದ ಶ್ರೀ ಭರತ್ ಶೆಟ್ಟಿ, ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 160 ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಭವ್ಯ ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಧನಲಕ್ಷ್ಮೀ ರವರು ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಶ್ರೀಮತಿ ಕವಿತಾ. ಐ ನಡೆಸಿದರು.