ಸಂಘದ 2023-24ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2024-25ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.275 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 210 ಕೋಟಿಗೂ ಮಿಕ್ಕಿ ಸಾಲ ನೀಡುವ ಗುರಿಯನ್ನು ಹೊಂದಿದೆ ಎಂದರು.
ಇಂದು ನಮ್ಮ ಸಂಘದ ಪ್ರಗತಿಗೆ ಸದಸ್ಯರಾದ ತಾವುಗಳು ಕಾರಣ ನಿಮ್ಮ ಸಂಪೂರ್ಣ ಸಹಕಾರಕ್ಕೆ ನಾವುಗಳು ಸದಾ ಋಣಿಯಾಗಿ ಇರುತ್ತೇವೆ. ಅದೇ ರೀತಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ ಎಲ್ಲಾ ಸಿಬ್ಬಂದಿವರ್ಗದ ಕಾರ್ಯವೈಖರಿಯನ್ನು ಮುಕ್ತ ಕಂಠದಿAದ ಶ್ಲಾಘನೆ ಮಾಡಿದರು. ಮುಂದಕ್ಕೆ ಸಂಘವು ಹಾಕಿಕೊಂಡಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸಂಘದ ಅಭೂತಪೂರ್ವ ಪ್ರಗತಿಗೆ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಘವು ವರದಿ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 147.54 ಲಕ್ಷ ಷೇರು ಬಂಡವಾಳ, ರೂ. 22494.98 ಲಕ್ಷ ಠೇವಣಿಯನ್ನು ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ. 17848.39 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ. 23649.04 ಲಕ್ಷ ಹೊಂದಿದೆ. ವರದಿ ವರ್ಷಕ್ಕೆ ಸಂಘವು ರೂ. 303.31 ಲಕ್ಷ ನಿವ್ವಳ ಲಾಭಗಳಿಸಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. 15 ಡಿವಿಡೆಂಡ್ ಘೋಷಿಸಲಾಯಿತು.
ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇವರಿಂದ ಅತೀ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸುವ ಪ್ರಶಸ್ತಿಯನ್ನು ಸಂಘ ಪಡೆದಿರುತ್ತದೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಉತ್ತಮ ಸಹಕಾರಿ ಸಂಘ” ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ 9 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ಪ್ರತಿಭಾ ಪುರಸ್ಕಾರ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗೌರವಾನ್ವಿತ ಸ್ಥಾನ ಅಲಂಕರಿಸಿದ ಸಂಘದ ಸದಸ್ಯರಾದ ಡಾ. ಸೇಸಪ್ಪ ಕೆ., ಶ್ರೀ ಯೋಗಿಶ್ ಕೋಟ್ಯಾನ್, ಶ್ರೀ ಶೀನ ಪೂಜಾರಿ, ಶ್ರೀ ಸತೀಶ್ ಕುಂಪಲ, ಶ್ರೀ ಹರೀಶ ಪಿ.ಡಿ, ಶ್ರೀ ಜಯವಿಕ್ರಂ ಪಿ., ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಪ್ರಭು, ಶ್ರೀ ಹೇಮಂತ್ ಕುಮಾರ್ ಗರೋಡಿ, ಶ್ರೀ ಶೇಕ್ ಅಬ್ದುಲ್ ಲತೀಪ್ ಸಹೇಬ್, ಶ್ರೀ ಯು. ಐತಪ್ಪ ಶೆಟ್ಟಿಗಾರ್, ಶ್ರೀ ದಿನೇಶ್ ನಾಯಕ್, ಶ್ರೀ ಸದಾಶಿವ ಪೂಜಾರಿ, ಶ್ರೀ ಬಿ. ರಾಜಶೇಖರ ಶೆಟ್ಟಿ, ಶ್ರೀ ಪ್ರವೀಣ್ ಎಸ್, ಶ್ರೀ ನವಾಜ್ ಹಾಗೂ ಶ್ರೀ ಹರೀಶ್ ಅಡ್ಯಾರ್ ರವರನ್ನು ಸಂಘದ ಪರವಾಗಿ ಗೌರವಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಬಹುಮುಖ ಪ್ರತಿಭೆಯಾಗಿರುವ ಸಂಘದ ಸದಸ್ಯರ ಮಕ್ಕಳಾದ ಕುಮಾರಿ ಐಶ್ವರ್ಯ ಆರ್. ಪೂಜಾರಿ, ಮಾಸ್ಟರ್ ಹವೀಶ್ ಆರ್ ಪೂಜಾರಿ, ಮಾಸ್ಟರ್ ಪ್ರದ್ಯುನ್ ಕುಮಾರ್, ಕುಮಾರಿ ಯುಕ್ತಿಕ, ಕುಮಾರಿ ತಸ್ವಿ, ಕುಮಾರಿ ಪ್ರಣಮ್ಯ ಪಿ. ಕೋಟ್ಯಾನ್, ಶ್ರೀಮತಿ ಅರ್ಚನಾ ಯಶೋಧರ್, ಕುಮಾರಿ ರಮ್ಯಾ ರಾವ್, ಕುಮಾರಿ ಶ್ರಾವಣಿ, ಶ್ರೀ ಪ್ರತೀಕ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಾದ ಕುಮಾರಿ ದೀಕ್ಷಾ, ಕುಮಾರಿ ಸಲೋನಿ ಜಯರಾಮ್ ಕಾರಂದೂರ್, ಶ್ರೀ ಪಿ. ಅಜ್ಮತುಲ್ ಮುಹಿಝ್, ಕುಮಾರಿ ವೀಕ್ಷ ಸುಮನ್, ಕುಮಾರಿ ಲಿಶಲ್ ಡಿಸೋಜ, ಕುಮಾರಿ ಭವಿಷ್ಯ, ಕುಮಾರಿ ಸ್ವೀಝಲ್ ಜೋಷ್ನ ಗೊನ್ಸಾಲ್ವಿಸ್, ಶ್ರೀ ಶ್ರಾವ್ನ್ ಹೆರ್ವಿನ್ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕುಮಾರಿ ಆಕಾಂಕ್ಷ ಕೆ. ಪೂಜಾರಿ, ಶ್ರೀ ಪವನ್ ಎನ್, ಕುಮಾರಿ ನಿಶಿತಾ ಪಿ. ಆರ್, ಶ್ರೀ ಕಾರ್ತಿಕ್ ಎಚ್, ಎಸ್, ಕುಮಾರಿ ಲೊರೈನ್ ಜೇನ್ ಡಿ ಅಲ್ಮೇಡಾ, ಕುಮಾರಿ ಹಿತಶ್ರೀ, ಕುಮಾರಿ ಶಾರ್ವರಿ ಎಮ್, ಶ್ರೀ ಜತೀಶ್ ಕೃಷ್ಣ ಕೆ. ಎಸ್, ಶ್ರೀ ಅರ್ಜುನ್, ಕುಮಾರಿ ರೇಷ್ಮಾ ಎಸ್, ಹಾಗೂ ಶ್ರೀ ಸುಹಾಸ್ ರವರನ್ನು ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ sಶ್ರೀ ಆನಂದ್ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ ಮತ್ತು ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಸ್ವಾಗತಿಸಿ, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ವಂದಿಸಿದರು. ಅಭಿನಂದನಾ ಪುರಸ್ಕಾರ ಕಾರ್ಯಕ್ರಮವನ್ನು ಸಹಾಯಕ ಪ್ರಬಂದಕರಾದ ಶ್ರೀ ವಿಶ್ವನಾಥ ರವರು ನಿರೂಪಿಸಿದರು.