ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಪ್ ಡೆಂಟಲ್ ಸಾಯನ್ಸ್ನ ದಂತ ವೈದ್ಯರಾದ ಡಾ. ಶಿಫಾಲಿ ಸಾಲಿಯಾನ್ ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಮುಂತಾದ ಸೇವೆಗಳು ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 73ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಶಿಬಿರವು ಸಂಘದ ಸದಸ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಶ್ರೀನಿವಾಸ್ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ.10.50 ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಶ್ರೀ ಜಿ. ಪರಮೇಶ್ವರ ಪೂಜಾರಿ s ಶ್ರೀ ಆನಂದ್ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ, ಶ್ರೀ ಜಗದೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಾಯಕ ಪ್ರಭಂಧಕರಾದ ಶ್ರೀ ವಿಶ್ವನಾಥ ರವರು ನಿರೂಪಿಸಿದರು.
