ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಂಪನಕಟ್ಟ ಶಾಖೆ ಮತ್ತು ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ನಿವೃತ್ತ ಸಹಕಾರಿ ಸಂಘಗಳ ಉಪ ನಿಬಂಧಕರಾದ ಶ್ರೀ ಚಂದ್ರಶೇಖರ್ ಸುವರ್ಣ ರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ಲಯನ್ಸ್ ಕ್ಲಬ್ ಮಂಗಳೂರು, ಆದಿತ್ಯ ಇದರ ಅಧ್ಯಕ್ಷರಾದ ಲಯನ್ ನರಸಿಂಹ ಪೈ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ” ಎಂದರು.

ದ ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಇದರ ಅಧ್ಯಕ್ಷರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು. ಇದರ ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್ ರವರು ಮಾತನಾಡಿ ಹಿರಿಯ ನಾಗರಿಕರಿಗೆ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರಗಳು ಅಗತ್ಯವಾಗಿರುತ್ತದೆ. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನೆಯನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ ನೀರುಮಾರ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗದಲ್ಲಿ ಜರುಗಿತು. ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ರಾಜೇಶ್ ಕಾಮತ್ ರವರು ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇಂತಹ ಜನಪರ ಸೇವಾ ಕಾರ್ಯಗಳು ಶ್ಲಾಘನೀಯ. ಈ ಸಹಕಾರಿ ಸಂಘದೊ0ದಿಗೆ ಸತತವಾಗಿ ಗುಣಮಟ್ಟದ ಶಿಬಿರಗಳನ್ನು ಹೆಮ್ಮೆಯಿಂದ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು.

ಮ0ಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ಬಿ.ಡಿ.ಒ. ಆದ ಶ್ರೀ ಜಯಚಂದ್ರ ನಾಯಕ್ ಮಾತನಾಡಿ, “ಆರೋಗ್ಯ ತಪಾಸಣೆಯು ಇಂದಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿ ಅತ್ಯಗತ್ಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಇಂತಹ ಉನ್ನತ ಸಂಸ್ಥೆಯೊ0ದಿಗೆ ಶಿಬಿರ ಆಯೋಜಿಸಲು ಅವಕಾಶ ದೊರೆತಿರುವುದು ನಮ್ಮ ಹೆಮ್ಮೆ ಎಂದರು. ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸೊಟ್ಟೊ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ದಿನಾಂಕ 30.08.2025 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25749.48 ಲಕ್ಷ ಹೊಂದಿದ್ದು, ರೂ. 3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ನಿವೃತ್ತ ಯೋಧ “ನಾಯಕ್” ಜಗದೀಶ್ ಎಮ್. ರವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಚರಣೆ ಬಗ್ಗೆ ಪ್ರಸ್ತಾಪಿಸಿದರು. ದೇಶ ಸೇವೆಯಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಶ ಸೇವೆಯ ಕಾಯಕದ ಜೊತೆಗೆ ತಮ್ಮ ಭವಿಷ್ಯವನ್ನು ಕೂಡ ಕೆಲಸದ ಭದ್ರತೆಯೊಂದಿಗೆ ಗಟ್ಟಿ ಗೊಳಿಸಬಹುದು. ದೇಶವನ್ನು ಬಲಿಷ್ಟಗೊಳಿಸುವ ಜವಾಬ್ದಾರಿ ಪ್ರಜೆಗಳದ್ದು, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಸಂಘದ ಅಧ್ಯಕ್ಷರಾದ “ಸಹಕಾರ ರತ”್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರತಿ ವರ್ಷ ಸ್ವಾತಂತ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾ ಬರುತ್ತಿದೆ. ಈ ಬಾರಿಯ ಸ್ವಾತಂತ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ರವರನ್ನು ಇವತ್ತಿನ ಸಮಾರಂಭದಲ್ಲಿ ಸನ್ಮಾನಿಸಲು ನಮ್ಮ ಸಂಘ ತುಂಬಾ ಹೆಮ್ಮೆ ಪಡುತ್ತಿದೆ, ದೇಶಕೋಸ್ಕರ ಹಲವು ಯುದ್ಧದಲ್ಲಿ ಭಾಗವಹಿಸಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯವೆಂದರು. ಈ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಯುವಕ ಮಂಡಲ (ರಿ.), ಯುವತಿ ಮಂಡಲ (ರಿ.) ವನಿತಾ ಸೇವಾ ಸಮಾಜ (ರಿ.), ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕೃಷ್ಣಾಪುರ-ಕಾಟಿಪಳ್ಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವಕ ಮಂಡಲ (ರಿ.) ೫ನೇ ವಿಭಾಗ ಕೃಷ್ಣಾಪುರ ಇಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಶ್ರೀಮತಿ ಲಕ್ಷಿ÷್ಮÃ ಶೇಖರ್ ದೇವಾಡಿಗ ರವರು ಉದ್ಘಾಟಿಸಿ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡಿಕೊಂಡು ಬರುತ್ತಿದೆ. ವಿಶೇಷವಾಗಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಅವಕಾಶವನ್ನು ನೀಡಿರುವುದು ಶ್ಲಾಘನೀಯ. ಹೆಣ್ಣುಮಕ್ಕಳು ಕುಟುಂಬ ಸಾಗಿಸಲು ಆರ್ಥಿಕ ಶಕ್ತಿಯಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿಂತಿದೆ” ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕೃಷ್ಣಾಪುರ ಯುವಕ ಮಂಡಲ (ರಿ.) ಇಲ್ಲಿನ ಗೌರವಾಧ್ಯಕ್ಷರಾದ ಶ್ರೀ ಪ್ರಶಾಂತ್ ಮುಡಾಯಿ ಕೋಡಿ ರವರು ಮಾತನಾಡಿ “ಮನುಷ್ಯರಾಗಿ ಹುಟ್ಟಿದ ಮೇಲೆ ತಂದೆ-ತಾಯಿ, ಸಂಸಾರವನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಜೊತೆಗೆ ಸಮಾಜದ ಕಷ್ಟವನ್ನು ನೀಗಿಸಬೇಕು ಎಂಬುದು ನಮ್ಮ ಹಿರಿಯರ ಸಂದೇಶ. ಅದೇ ರೀತಿ ಇಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿ ಉತ್ತಮ ಕಾರ್ಯವನ್ನು ಮಾಡುತ್ತಿದೆ ಎಂದರು. ಮಂಗಳ ಕಾಲೇಜ್, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ […]

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್‌ನಲ್ಲಿ ಆಚರಿಸಲಾಯಿತು. ದೈವರಾಧಕರಾದ ಶ್ರೀ ಪೂವಪ್ಪ ಪೂಜಾರಿಯವರು ಹಿಂಗಾರವನ್ನು ಅರಳಿಸುವ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ದೈವರಾಧಕರಾದ ಶ್ರೀ ಪೂವಪ್ಪ ಪೂಜಾರಿ, ನಾಟಿ ವೈದ್ಯರಾದ ಶ್ರೀ ತಿಲಕ್‌ರಾಜ್ ಹಾಗೂ ಕಾಸರಗೋಡಿನ ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀ ಚೇತನ್ ಮುಂಡಾಜೆ ಯವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.

ಕಾಸರಗೋಡಿನ ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀ ಚೇತನ್ ಮುಂಡಾಜೆ ಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಇವತ್ತಿನ “ಆಟಿದ ಪೊಲಬು” ಕಾರ್ಯಕ್ರಮದಲ್ಲಿ ದೈವರಾಧಕರು ಹಾಗೂ ನಾಟಿ ವೈದ್ಯರನ್ನು ಸನ್ಮಾನಿಸುವ ಮೂಲಕ ತುಳುನಾಡಿನ ಸಂಸ್ಕöತಿ ಹಾಗೂ ಭಾಷೆಯನ್ನು ಬೆಳೆಸುವ ಕೆಲಸಗಳನ್ನು ಮಾಡುತ್ತಿದೆ. ಇವರುಗಳ ಜೊತೆಯಲ್ಲಿ ನನ್ನನ್ನು ಗುರುತಿಸಿ ಸನ್ಮಾನಿಸಿರುವುದು ತುಂಬಾ ಸಂತೋಷವಾಗುತ್ತಿದೆ. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ “ಆಟಿದ ಪೊಲಬು” ವಿಶಿಷ್ಟವಾದ ಕಾರ್ಯಕ್ರಮವನ್ನು ಆಯೋಜಿಸಿ, ವೇದಿಕೆಯನ್ನು ತುಳುನಾಡಿನ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಶ್ರೀ ಸಿಸ್ಟರ್ ಐಲಿನ್ ಮಥಾಯೀಸ್, ಶ್ರೀ ಕೆ. ಶಿವಪ್ರಸಾದ್ ಆಚಾರ್ಯ ಹಾಗೂ ಶ್ರೀ ಅಬ್ಬಾಸ್ ಉಚ್ಚಿಲ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಗ್ರಾಹಕರಾದ ಶ್ರೀ ಸಿಸ್ಟರ್ ಐಲಿನ್ ಮಥಾಯೀಸ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿದ್ದಲ್ಲಿ ಸ್ಥಳಾವಕಾಶವನ್ನು ಮಾಡಿಕೊಡುವುದಾಗಿ ತಿಳಿಸಿದರು.

ಶ್ರೀ ಕೆ. ಶಿವಪ್ರಸಾದ್ ಆಚಾರ್ಯ ರವರು ಮಾತನಾಡಿ “ಕೆ.ಸಿ. ರೋಡ್ ಶಾಖೆಯಲ್ಲಿ ಸಿಬ್ಬಂದಿಗಳ ಗ್ರಾಹಕ ಸ್ನೇಹಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಅಬ್ಬಾಸ್ ಉಚ್ಚಿಲ ರವರು ಮಾತನಾಡಿ “ಕೆ.ಸಿ. ರೋಡ್ ಶಾಖೆಯು ಎರಡು ವರುಷದಲ್ಲಿ ಈ ಭಾಗದ ಜನತೆಗೆ ತನ್ನ ಕಾರ್ಯವೈಖರಿಯಿಂದ ತುಂಬಾ ಹತ್ತಿರವಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಲ್ಲಿ ಮನವಿಯನ್ನು ಮಾಡಿದರು. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಪಿ.ಕೆ ಉಪಧ್ಯಾಯ, ಶ್ರೀ ಶ್ರೀನಿವಾಸ್ ರಾವ್, ಶ್ರೀಮತಿ ರಾಧ, ಶ್ರೀ ಅಬ್ದುಲ್ ಖಾದರ್ ಹಾಗೂ ಶ್ರೀಮತಿ ದೀಕ್ಷಿತ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಪಿ.ಕೆ ಉಪಾಧ್ಯಯ ರವರು ಮಾತನಾಡಿ “ಸಹಕಾರ ಸಂಘಗಳಲ್ಲಿ ಬೆಳವಣಿಗೆಯಲ್ಲಿ ಠೇವಣಿದಾರರು ಹಾಗೂ ಸಾಲಗಾರರ ಪಾತ್ರ ತುಂಬಾ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರ ಸಭೆಯನ್ನು ಆಯೋಜಿಸಿ ಸಂಘದ ಗ್ರಾಹಕರನ್ನು ನೆನೆಪಿಸಿಕೊಳ್ಳುವ ಕಾರ್ಯ ಮಾಡಿರುವುದು ಶ್ಲಾಘನೀಯ” ವೆಂದರು. ಶ್ರೀ ಪಿ.ಎಚ್.ಎಂ ರಫಿûÃಕ್ ರವರು ಮಾತನಾಡಿ “ಕೃಷ್ಣಾಪುರ ಶಾಖೆಯಲ್ಲಿ ಸಿಬ್ಬಂದಿಗಳ ಸೇವೆಯು ಉತ್ತಮವಾಗಿದ್ದು, ಇದು ಶಾಖೆಯ ಬೆಳವಣಿಗೆಗೆ ಕಾರಣ. ಆತ್ಮಶಕ್ತಿಯು ಹೀಗೆಯೆ ಉತ್ತಮ ಸೇವೆಗಳನ್ನು ನೀಡುತ್ತಾ ಇನ್ನಷ್ಟೂ ಬೆಳಗಲಿ” ಎಂದು ಶುಭಹಾರೈಸಿದರು. ಶ್ರೀಮತಿ ಯಶಸ್ವಿನಿ ರವರು ಮಾತನಾಡಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಪುಟ್ಟಸ್ವಾಮಿ ಹೆಚ್, ಶ್ರೀ ರಮೇಶ್ ಯು, ಶ್ರೀ ಶ್ರೀಧರ್ ಹಾಗೂ ಶ್ರೀ ಅಶೋಕ್ ಎಮ್.ಕೆ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಶ್ರೀಮತಿ ಸುಮ ಪ್ರಸಾದ್ ರವರು ಮಾತನಾಡಿ ಶಾಖೆಯು ಗ್ರಾಹಕರಿಗೆ ಉತ್ತಮ ಬ್ಯಾಂಕಿAಗ್ ಸೇವೆ ನೀಡುತ್ತಿದ್ದು, ಶಾಖೆಯ ಸಿಬ್ಬಂದಿಗಳ ನಗುಮೊಗದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಸದಸ್ಯರಾದ ಶ್ರೀ ರಾಜರಾಮನ್ ತಾಳಿಪಾಡಿ ರವರು ಮಾತನಾಡಿ ಶಾಖೆಯಲ್ಲಿ ಇ-ಸ್ಟಾಂಪಿAಗ್ ಸೇವೆಯನ್ನು ಶೀಘ್ರವಾಗಿ ನೀಡುತ್ತಿರುವ ಹಾಗೂ ಆಯ್ದ ರಜಾ ದಿನಗಳಲ್ಲಿ ಬ್ಯಾಂಕಿAಗ್ ಹಾಗೂ ಇ-ಸ್ಟಾಂಪಿAಗ್ ಸೇವೆ ನೀಡುತ್ತಿರುವದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು. ಸAಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿŒ “ಸಂಸ್ಥೆಯು 13 ವರ್ಷದಲ್ಲಿ 33 ಶಾಖೆಗಳನ್ನು ತೆರೆದು, ೨೦೦೦ ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಲು ಗ್ರಾಹಕರೇ ಕಾರಣ. ಗ್ರಾಹಕರ ಸಹಕಾರದಿಂದ ನಮ್ಮ ಸಂಸ್ಥೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಯಿತು. ಬ್ಯಾಂಕಿAಗ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿAದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ.) ಗ್ರಾಮಚಾವಡಿ ಕೊಣಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ(ರಿ.), ಅಂಬ್ಲಮೊಗರು, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಎಲ್ಯಾರ್‌ಪದವು, ಯುವ ಕ್ಯಾಥೋಲಿಕ್ ಸಂಚಲನ ಎಲ್ಯಾರ್‌ಪದವು, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ) ಎಲ್ಯಾರ್‌ಪದವು ಇವರ ಸಹಕಾರದೊಂದಿಗೆ ಶರೂನ್ ಸ್ಟçಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ ಎಲ್ಯಾರ್‌ಪದವು ಕೊಣಾಜೆ ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಯ ವೈದ್ಯರಾದ ಡಾ| ರಾಘವೇಂದ್ರ ರವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕಣಚೂರು ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಔಷಧಿ ವಿತರಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದಲ್ಲದೇ ಈ ಶಿಬಿರದಲ್ಲಿ ಅನೇಕ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಇದರ […]