ಸಂಘದ ಅಳದಂಗಡಿ ಶಾಖೆಯ ಕಟ್ಟಡದ ಮಾಲೀಕರಾದ ಶ್ರೀ ವಿಶ್ವನಾಥ ಕುದ್ಯಾಡಿ ರವರು ಮಾತನಾಡಿ ” ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಊರಿನ ಸಂಘ ಸಂಸ್ಥೆಗಳ ಜೊತೆಗೆ ಎಲ್ಲಾ ಹಿರಿಯರನ್ನು ಒಟ್ಟುಗೂಡಿಸಿ ಮಾಡುತ್ತಿರುವ ವೈದ್ಯಕೀಯ ಶಿಬಿರವು ಸಮಾಜಮುಖಿ ಚಟುವಟಿಕೆಯಾಗಿದ್ದು, ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಭಿನಂದನೆ” ಸಲ್ಲಿಸಿದರು.
ಜೆಸಿಐ ಬೆಳ್ತಂಗಡಿ ಇದರ ಕಾರ್ಯದರ್ಶಿಯಾದ ಶ್ರೀ ರಕ್ಷಿತ್ ಅಂಡಿಜೆ ರವರು ಮಾತನಾಡಿ “ಆತ್ಮಶಕ್ತಿ ಸಹಕಾರಿ ಸಂಘವು ಬೇರೆ ಎಲ್ಲಾ ಸಹಕಾರಿ ಸಂಘಗಳಿಗಿ೦ತ ವಿಭಿನ್ನವಾಗಿ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಕಾರ್ಯಚರಿಸುತ್ತಿದೆ” ಎಂದು ಶ್ಲಾಘಿಸಿದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಭರತ್ ಕುಮಾರ್ ರವರು ಮಾತನಾಡಿ “ರಕ್ತದಾನ ಶ್ರೇಷ್ಠ ದಾನ . ಸಾರ್ವಜನಿಕರ ಆರೋಗ್ಯದ ದೂರ ದೃಷ್ಟಿಯನ್ನು ಗಮನದಲ್ಲಿಸಿ ಶಿಬಿರಗಳನ್ನು ಆಯೋಜಿಸುತ್ತಿರುವುದಕ್ಕೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಶಿಬಿರದ ಲಭ್ಯವಿರುವ ಸೇವೆಗಳ ಬಗ್ಗೆ ತಿಳಿಸಿ, ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ೧೪ ವರ್ಷಗಳಿಂದ ಆರೋಗ್ಯ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಇದು ಸಂಘದ ೧೧೦ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಹಣಕಾಸಿನಲ್ಲಿ ನಾವು ಎಷ್ಟೆ ಸದೃಡರಿದ್ದರೂ, ಆರೋಗ್ಯವು ನಮಗೆ ಮುಖ್ಯ. ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸುವುದರ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬಹುದು. ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿರಿಸಿ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರವನ್ನು ಸಂಘವು ಆಯೋಜಿಸಿರುತ್ತದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಈ ಶಿಬಿರವು ಅಳದಂಗಡಿ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗೆಯೇ ಬಡವ ಶ್ರೀಮಂತ ಎಂಬ ಭೇದ ಭಾವವಿಲ್ಲದೆ ಎಲ್ಲರೂ ಶಿಬಿರದ ಸದೋಪಯೋಗ ಪಡೆದುಕೊಳ್ಳಿ. ಎಂದರು. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಪರಿಗಣಿಸಲ್ಪಟ್ಟ÷ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಹಾಗೂ ರಕ್ತದಾನ ವಿಭಾಗ, ಯೆನೆಪೋಯ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೂ, ಸಹಕರಿಸಿದ ಎಲ್ಲಾ ಸಂಘ -ಸಂಸ್ಥೆಗಳಿಗೂ ಕೃತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಶಿರ್ಲಾಲು ಇದರ ಉಪಾಧ್ಯಕ್ಷರಾದ ಶ್ರೀ ಹರೀಶ್ಚಂದ್ರ ಕಲ್ಲಾಜೆ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ಮೆಡಿಕಲ್ ಆಫಿಸರ್ ಡಾ! ಶಿರಿಶ್, ಸಮುದಾಯ ದಂತ ವಿಭಾಗದ ಉಪಾನ್ಯಾಸಕರಾದ ಡಾ! ಮಿಫ್ರಾ, ಹಿರಿಯ ವೈದಕೀಯ ಸಮಾಜ ಸೇವಾ ಅಧಿಕಾರಿಯಾದ ಡಾ! ಸ್ವಿಕೃತ, ಮತ್ತಿತರರು ಉಪಸ್ಥಿತರಿದ್ದರು.
ಈ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಬಳಂಜ, ಜೆಸಿಐ ಬೆಳ್ತಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಶಿರ್ಲಾಲು ಹಾಗೂ ಯುವಶಕ್ತಿ ನಾವಾರ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು.
ಈ ಶಿಬಿರದಲ್ಲಿ ವಿಶೇಷವಾಗಿ ಬಸವ ಆಕ್ಯೂ ಅಕಾಡೆಮಿಯ ಡಾ! ಬಸವರಾಜ್ ಕೆ. ರವರ ವಿದ್ಯಾರ್ಥಿಯಾದ ಶ್ರೀ ಸುಕೇಶ್ ಜೈನ್ ರವರ ತಂಡದಿ೦ದ ಕಲರ್ ಥೆರಪಿಯನ್ನು ಆಯೋಜಿಸಲಾಗಿತ್ತು.
ಈ ಶಿಬಿರದ ಪ್ರಯೋಜನವನ್ನು ಸುಮಾರು ೧೫೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪಡೆದುಕೊಂಡರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಗುಮಾಸ್ತೆಯಾದ ಶ್ರೀಮತಿ ಸ್ವಾತಿ ಎಸ್. ರವರು ಸ್ವಾಗತಿಸಿ, ಮೂಡಬಿದಿರೆ ಶಾಖೆಯ ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ರವಿಕಲಾ ರವರು ವಂದಿಸಿದರು. ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿ ಶ್ರೀಮತಿ ಕಾವ್ಯಶ್ರಿ ರವರು ಕಾರ್ಯಕ್ರಮವನ್ನು ನಿರೂಪಿಸಿದರು.