ಅಂತರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ “ಆತ್ಮಶಕ್ತಿ ಸೌಧ”, ಪಡೀಲ್‌ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಗಣ್ಯರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತಾನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.) ಇದರ ರಾಜ್ಯ ಸಂಚಾಲಕರಾದ ಶ್ರೀ ರವೀಶ್ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.) ಇದರ ರಾಜ್ಯ ಸಂಚಾಲಕರು ಹಾಗೂ ಯೋಗ ಶಿಕ್ಷಕರಾದ ಶ್ರೀ ರವೀಶ್ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ , ನಿರ್ದೇಶಕರಾದ ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.