ಸಮಾರಂಭದಲ್ಲಿ ದಿವ್ಯ ಸಾನ್ನಿದ್ಯವನ್ನು ವಹಿಸಿದ್ದ ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ “ಮಾನವ ಆದಿಯಿಂದಲೂ ಹುಟ್ಟಿನಾರಭ್ಯ ಸಹಕಾರ ತತ್ವದಿಂದಲೇ ಬದುಕನ್ನು ಬಹುವಾಗಿ ಸಿರಿವಂತಗೊಳಿಸಿದವ. ಅದರ ಮುಂದುವರಿದ ಭಾಗವೇ ಇಂದಿನ ಸಹಕಾರ ಸಂಘಗಳ ಸೇವಾ ಭಾವ, ಮನುಕುಲೋದ್ದಾರಕ್ಕೆ ಸಹಕಾರಿ ಸಂಘಗಳು ಮತ್ತಷ್ಟೂ ಹಿರಿದಾದ ಪಾಲನ್ನು ಸಲ್ಲಿಸುವಂತಾಗಲಿ. ಈ ನಿಟ್ಟಿನಲ್ಲಿ ಇವತ್ತಿನ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವು ಶ್ಲಾಘನೀಯ” ಎಂದು ಹರಸಿದರು. ಮಾಡೂರಿನ ಶಿವ ದುರ್ಗಾಂಭ […]








