Blog

ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಜೊತೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ವಿಮಾ ಕ್ಷೇತ್ರದಲ್ಲಿ ಪ್ರತೀ ವರ್ಷ ಗರಿಷ್ಟ ಗುರಿಯನ್ನು ತಲುಪುತ್ತಿದ್ದು, ಸಾಧನೆಗೆ ಸತತ ೮ ವರ್ಷಗಳಿಂದ ವಿವಿಧ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಶ್ರೀ ಚಂದಪ್ಪ ಕುಂದರ್ ಹಾಗೂ ಶ್ರೀ ಪ್ರದೀಪ್ ಕುಮಾರ್ ಸುವರ್ಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಚುರುಕುತನ ಹಾಗೂ ಸಿಬ್ಬಂದಿಗಳ ನಗುಮೊಗದ ಸೇವೆಯಿಂದಾಗಿ ಅತೀ ಹೆಚ್ಚಿನ ವ್ಯವಹಾರ ಹೊಂದಲು ಕಾರಣವೆಂದು ಶ್ಲಾಘಿಸಿದರು. ಸಂಘವು ಅತೀ ಕಿರು ಅವಧಿಯಲ್ಲಿ ಸ್ವಂತ ಕಟ್ಟಡ ಹೊಂದಿ ಸಹಕಾರ ರಂಗದಲ್ಲಿಯೇ ಅತೀ ಉತ್ತಮ ಸ್ಥಾನ ಗಳಿಸಿದೆ. ಸಂಘದಲ್ಲಿ ಸದಸ್ಯರು ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ್ದಲ್ಲಿಮಾತ್ರ ಲಾಭ ಗಳಿಸಲು ಸಾಧ್ಯವಿದೆ ಎಂದರು.

ಸಂಘದ ಸದಸ್ಯರಾದ ಶ್ರೀ ಮಾಧವ ಎಮ್ ಅಮೀನ್ ರವರು ಮಾತನಾಡಿ ಸಿಬ್ಬಂದಿಗಳು ದೊಡ್ದ ಆಲದ ಮರದ ಬೇರುಗಳಿದ್ದಂತೆ. ಬೇರುಗಳು ಎಲ್ಲಾ ಕಡೆ ಹರಡಿ ಮರವನ್ನು ಭದ್ರವಾಗಿ ನಿಲ್ಲಿಸುವಲ್ಲಿ ಕಾರಣವಾಗುತ್ತದೆ. ಅಂತೆಯೇ ಸಿಬ್ಬಂದಿಗಳು ಸಂಘವನ್ನು ಮುನ್ನಡೆಸುವಲ್ಲಿ ಕಾರಣಕರ್ತರೆಂದು ಶ್ಲಾಘಿಸಿದರು. ಶ್ರೀ ವೈ ಕೃಷ್ಣಮೂರ್ತಿ ರಾವ್ ರವರು ಮಾತನಾಡಿ ಸಂಘದಲ್ಲಿ ೯೫% ಮಹಿಳಾ ಸಿಬ್ಬಂದಿಗಳು ಇದ್ದು, ಇದು ಮಹಿಳಾ ಸಬಲೀಕರಣಕ್ಕೆ ಕಾರಣವಾಗಿದ್ದು, ೧೦ ವರ್ಷಗಳಲ್ಲಿ ೩೦ ಶಾಖೆಗಳನ್ನು ತೆರೆದು ಎಲ್ಲಾ ಶಾಖೆಗಳಲ್ಲಿ ಶಾಖಾಧಿಕಾರಿಗಳು ಮಹಿಳೆಯರೇ ಇರುವುದನ್ನು ಶ್ಲಾಘಿಸಿದರು. ಶ್ರೀ ವಿಶ್ವನಾಥ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಪ್ರಧಾನ ಕಛೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾದನೆಗೈದಿರುವ ಸಾಧಕ ಮಹಿಳೆಯರಾದ ಸಿ.ಸಿ.ಬಿ ಕ್ರೆöÊಮ್, ಮಂಗಳೂರು ಇದರ ಸಹಾಯಕ ಪೋಲೀಸ್ ಆಯುಕ್ತರಾಗಿರುವ ಶ್ರೀಮತಿ ಗೀತಾ ಕುಲಕರ್ಣಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಇವರಿಗೆ “ಆತ್ಮಸಮ್ಮಾನ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ನೀಡಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿ.ಸಿ.ಬಿ. ಕ್ರೆöÊಮ್, ಮಂಗಳೂರು ಇದರ ಸಹಾಯಕ ಪೋಲೀಸ್ ಆಯುಕ್ತರಾಗಿರುವ ಶ್ರೀಮತಿ ಗೀತಾ ಕುಲಕರ್ಣಿ “ಹೆಣ್ಣು ಎಲ್ಲರಿಗೂ ಆದರ್ಶಪ್ರಾಯಳು. ಏಕೆಂದರೆ ಎಲ್ಲಾ ಕೆಲಸಗಳನ್ನು ನಿಭಾಯಿಸಬಲ್ಲ ಶಕ್ತಿಯನ್ನು ಹೊಂದಿರುತ್ತಾಳೆ. ಒಂದು ಕಡೆ ಮನೆ ಜವಾಬ್ದಾರಿ, ಇನ್ನೊಂದು ಕಡೆ ಮನೆ , ಮಕ್ಕಳ ಜವಾಬ್ದಾರಿಯ ಜೊತೆ ಕೆಲಸದ ಹೊಣೆಗಾರಿಕೆ. ಹೆಣ್ಣು ಸಹನಾಮಯಿ, ಹಾಗೂ ಹೆಣ್ಣು ಮನಸ್ಸು ಮಾಡಿದರೆ ಯಾವುದೇ ಕೆಲಸವನ್ನು ಯಾವುದೇ ಹಿಂಜರಿಕೆ ಇಲ್ಲದೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲೇ ನಿಭಾಯಿಸುವಳು ಎಂದು ಕೆಲವು ಆದರ್ಶ ಮಹಿಳೆಯರ ಹೆಸರುಗಳನ್ನು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಶ್ರೀಗುರು ಸಭಾಭವನ , ಅಳದಂಗಡಿ ಇಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಇದರ ಅಧ್ಯಕ್ಷರಾದ ಶ್ರೀಯುತ ರಂಜಿತ್ ಯಚ್.ಡಿ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವುದು ಒಂದು ಒಳ್ಳೆಯ ಕೆಲಸ, ಯಾಕೆಂದರೆ ಆರೋಗ್ಯದಿಂದ ಇದ್ದರೆ ಮಾತ್ರ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯ. ಈ ಆರೋಗ್ಯ ಶಿಬಿರದ ಮುಖ್ಯ ಉದ್ದೇಶವೆನೆಂದರೆ ಮಂಗಳೂರಿಗೆ ಹೋಗಿ ಆರೋಗ್ಯ ತಪಾಸಣೆ ಮಾಡುವುದು ಕೆಲವರಿಗೆ ಅಸಾಧ್ಯ ಅಂತವರಿಗೆ ಈ ಶಿಬಿರವು ತುಂಬಾ ಸಹಕಾರಿಯಾಗುತ್ತದೆ. ಇಂತಹ ಉತ್ತಮ ಸಮಾಜಮುಖಿ ಕಾರ್ಯವನ್ನು ಮಾಡಿರುವ […]

ಕೇರ್ ಇನ್ಸೂರೆನ್ಸ್ ಕಂಪೆನಿಯ ಅಂತಾರಾಷ್ಟಿçÃಯ ಸಮ್ಮೇಳನವು ನೆದರ್‌ಲ್ಯಾಂಡನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆಯಿತು. ಈ ಸಮ್ಮೇಳನದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟçಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಕೇರ್ ಇನ್ಸೂರೆನ್ಸ್ ಕಂಪೆನಿಯ ರಾಷ್ಟಿçÃಯ ಮುಖ್ಯಸ್ಥರಾದ ಶ್ರೀ ಶರ್ಮಿಲ್ ಮೋದಿರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ವಲಯ ಮುಖ್ಯಸ್ಥರಾದ ಶ್ರೀ ಜಗದೇವ್ ಸಿಂಗ್, ಶ್ರೀ ಹರಿಂದಾಮ್ ಸಿನ್ಹ ಮತ್ತಿತ್ತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೬೩ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಈ ಶಿಬಿರಗಳಲ್ಲಿ ಕಡುಬಡವರಿಗೆ ಉಚಿತ ಔಷದಿ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, ೪೦೦ಕ್ಕೂ ಮಿಕ್ಕಿ ಕಣ್ಣಿನ ಶಸ್ತçಚಿಕಿತ್ಸೆ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್‌ವ್ಹೀಲ್ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪೆತ್ರೆ , ದೇರಳಕಟ್ಟೆ ಇವರ ನುರಿತ ವೈದರ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ ಹಾಗೂ ಭಾರತಿಯ ಅಂಚೆ ಇಲಾಖೆ- ಪುತ್ತೂರು ವಿಭಾಗದಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಪುತ್ತೂರಿನ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಕೆ. ಎಸ್. ಆರ್. ಟಿ. ಸಿ. ಡಿಪ್ಪೋ ಇದರ ಹಿರಿಯ ಮ್ಯಾನೇಜರ್ ಆಗಿರುವ ಶ್ರೀ ಇಸ್ಮಾಯಿಲ್ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಕಾಳಜಿ ವಹಿಸಿ ಇಂತಹ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ, ಇಂತಹ ಸಮಾಜಪರ ಕಾರ್ಯಕ್ರಮಕ್ಕೆ ಕೆ. ಎಸ್. ಆರ್. ಟಿ. ಸಿ. ನಿಲ್ದಾಣವನ್ನು ಉಚಿತವಾಗಿ ನೀಡಿ ನಮ್ಮ ಸಹಕಾರವನ್ನು ನೀಡಿರುತ್ತೇವೆ ಎಂದು ತಿಳಿಸಿದರು. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಸ್ಥಾಪನಾ ದಿನಾಚರಣೆ ಪ್ರಯುಕ್ತ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ ಹಾಗೂ ಶ್ರೀನಿವಾಸ ಇನ್ಸ್ಟ್ಯೂಟ್ ಆಫ್ ಡೆಂಟಲ್ ಸಾಯನ್ಸ್, ಮುಕ್ಕ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಸಿ.ಎಸ್.ಸಿ ಮಂಗಳೂರು ಇದರ ವತಿಯಿಂದ ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಜಪ್ಪಿನಮೊಗರುವಿನ ಉದ್ಯಮಿಗಳಾದ ಶ್ರೀ ಲಕ್ಷಿ÷್ಮÃನಾರಾಯಣ ಕಂರ್ಬಿಸ್ಥಾನ ಇವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಕಾಳಜಿ ಮಾಡುತ್ತಿರುವುದು ಪ್ರಶಂಸನೀಯ ಎಂದರು. ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ನೇತ್ರತ್ವದಲ್ಲಿ ತುಂಬಾ ಒಳ್ಳೆಯ ಸೇವೆಯನ್ನು ನೀಡುತ್ತಿದೆ ಹಾಗೂ ಮುಂದಕ್ಕೂ ಜನರಿಗೆ ಉತ್ತಮ ಸೇವೆಯನ್ನು ನೀಡುವಂತೆ ಭಗವಂತನು ಸೌಭಾಗ್ಯವನ್ನು ನೀಡಲೆಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಥಾಪನಾ ದಿನಾಚರಣೆ, ಹವಾ ನಿಯಂತ್ರಿತ ಸಭಾಂಗಣ ಮತ್ತು ನೂತನ ಸೌರ ವಿದ್ಯುತ್ ಘಟಕ ಉದ್ಘಾಟನಾ ಸಮಾರಂಭವು ‘ಆತ್ಮಶಕ್ತಿ ಸೌಧ’ ಸಭಾಂಗಣ, ಪಡೀಲ್‌ನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಮಾನಾಥ್ ರೈರವರು ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಹೆಚ್ಚಿನ ಸಹಕಾರಿ ಸಂಘಗಳು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ ಹಾಗೂ ರಾಷ್ಟೀಕೃತ ಬ್ಯಾಂಕುಗಳು ನೀಡುವ ಸೇವೆಗಿಂತ ಹೆಚ್ಚಿನ ಸೇವೆಯನ್ನು ನೀಡುತ್ತಿದೆ. ಅಲ್ಪವಧಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಯು ಅಪಾರವಾದದ್ದು, ಈ ಸಂಘವು ಮಹಿಳಾ ಸಬಲೀಕರಣಕ್ಕೆ ತುಂಬಾ ಒತ್ತು ನೀಡುತ್ತಿದೆ ಹಾಗೂ ಜನರ ವಿಶ್ವಾಸ ಗಳಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನೂತನ ಹವಾ ನಿಯಂತ್ರಿತ ಸಭಾಂಗಣವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌ರವರು ಉದ್ಘಾಟಿಸಿ ಮಾತನಾಡಿ ಸಂಘದ ಸಭಾಂಗಣವು ಮುಂದಿನ ದಿನಗಳಲ್ಲಿ ಎಲ್ಲಾ ವರ್ಗದ ಬಡ ಜನರಿಗೆ ಅವಕಾಶ ಕಲ್ಪಿಸಿಕೊಡುವಂತಾಗಲಿ. ಹೆಚ್ಚಿನ ರಾಷ್ಟಿçÃಕೃತ ಬ್ಯಾಂಕುಗಳು ಪ್ರಾರಂಭವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ನೀಡಿದ ಕೊಡುಗೆ ಅಪಾರವಾದದ್ದು, ಮುಂದಿನ ದಿನಗಳಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳು ಸ್ವಂತ ಕಟ್ಟಡ ಹೊಂದಲಿ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ‘ಆತ್ಮಶಕ್ತಿ ಸೌಧ’ ಸಭಾಂಗಣ, ಪಡೀಲ್‌ನಲ್ಲಿ ಜರುಗಿದ ಸಮಾರಂಭದಲ್ಲಿ ಸಂಘದಲ್ಲಿ ಸೇವೆ ಸಲ್ಲಿಸಿರುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮಾ ಕಾರ್ಡ್ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌ರವರು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ, ಸಂಘದ ಪಿಗ್ಮಿ ಸಂಗ್ರಹಕಾರರು ಸಂಘದ ಅಡಿಪಾಯವಾಗಿದ್ದು, ಸಂಘದಲ್ಲಿ ೧೦೦ಕ್ಕೂ ಅಧಿಕ ಪಿಗ್ಮಿ ಸಂಗ್ರಾಹಕರು ಸೇವೆ ಸಲ್ಲಿಸುತ್ತಿದ್ದು, ಅವರ ಆರೋಗ್ಯದ ಕಾಳಜಿಯಿಂದ ಉಚಿತ ಆರೋಗ್ಯ ವಿಮೆಯನ್ನು ಸಂಘದ ವತಿಯಿಂದ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಸಂಘದಲ್ಲಿ ೨ ವರ್ಷಕ್ಕೂ ಅಧಿಕ ಸೇವೆ ಸಲ್ಲಿಸುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಸಂಘದ ವತಿಯಿಂದ ಉಚಿತ ಆರೋಗ್ಯ ವಿಮಾ ಕಾರ್ಡ್ ಅನ್ನು […]

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಬೆಂಗಳೂರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಮಂಗಳೂರು ಇವರ ಸಹಯೋಗದೊಂದಿಗೆ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ,ಚಿಕ್ಕಮಗಳೂರು ,ಉಡುಪಿ,ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಹಾಗೂ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಭಾಂಗಣ “ಆತ್ಮಶಕ್ತಿ ಸೌಧ”, ಪಡೀಲ್ ಮಂಗಳೂರು ಇಲ್ಲಿ ನಡೆಸಲಾಯಿತು.

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಕೆ. ಹರೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪ್ರಗತಿಗೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊಡುಗೆ ಅಪಾರವಾದುದ್ದು, ಸಾಲ ವಸೂಲಾತಿಯಲ್ಲಿ ಮುಂಚೂಣಿಯಲ್ಲಿದ್ದರೆ ಮಾತ್ರ ಸಂಘ ಲಾಭದಾಯಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಇಂತಹ ಕಾರ್ಯಗಾರವನ್ನು ಆಯೋಜಿಸಿದ್ದಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ […]