Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‍ಬ್ಯಾಂಕ್ ಶಾಖೆಯ 7ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಉದ್ಘಾಟನೆ ಮಾತುಗಳನ್ನಾಡಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ರವರು ಸಂಘದ ಬೆಳವಣಿಗೆ ಹಾಗೂ ಉತ್ತಮ ಸೇವೆಯಿಂದ ಇಂದು ಆತ್ಮಶಕ್ತಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ಸಂಘದ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಸತತವಾಗಿ ಸಂಘವು ಹೆಚ್ಚಿನ ಲಾಭಗಳಿಸಿ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ, ಸದರಿ ಶಾಖೆಯಲ್ಲಿ ಇ-ಸ್ಟಾಂಪ್ ಸೇವೆಯು ಸಂಜೆ 7 ಗಂಟೆಯವರೆಗೆ ಲಭ್ಯವಿದ್ದು, ಸದಸ್ಯರು […]

ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಸಿಬ್ಬಂದಿಗಳಿಗೆ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ಕಾರ್ಯಗಾರವು ಮಂಗಳೂರು ಇನ್‍ಸ್ಟಿಟ್ಯೂಟ್ ಆಪ್ ಆಂಕೊಲಾಜಿ, ಸ್ಪೇಷಾಲಿಟಿ ಕ್ಯಾನ್ಸರ್ ಆಸ್ಪತ್ರೆ ಪಂಪುವೆಲ್ ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 22.10.2022 ರಂದು ಸಂಘದ ಪ್ರಧಾನ ಕಚೇರಿ ನಗರದ ಪಡೀಲ್‍ನ ಆತ್ಮಶಕ್ತಿ ಸೌಧದ ಸಭಾಂಗಣದಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಇನ್‍ಸ್ಟಿಟ್ಯೂಟ್ ಆಪ್ ಆಂಕೊಲಾಜಿಯ ನಿರ್ದೇಶಕರು ಹಾಗೂ ಸೀನಿಯರ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ. ಕೃಷ್ಣಪ್ರಸಾದ್‍ರವರು ಕ್ಯಾನ್ಸರ್ ರೋಗ ಬರಲು ಕಾರಣ, ಅದನ್ನು ತಡೆಗಟ್ಟುವಿಕೆ ಹಾಗೂ ನಿವಾರಣೆಯ ಬಗ್ಗೆ ಅತ್ಯುತ್ತಮ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಡಾ. ಕೃಷ್ಣಪ್ರಸಾದ್‍ರವರನ್ನು ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ನಿರ್ದೇಶಕರುಗಳಾದ ಶ್ರೀ ಚಂದ್ರಹಾಸ ಮರೋಳಿ , ಶ್ರೀ ಗೋಪಾಲ್ ಎಮ್. ಶ್ರೀಮತಿ ಉಮಾವತಿ, ಸಂಘದ […]

ಶ್ರೀ ಅಂಬಲಪಾಡಿ ದೇವಾಲಯದ ಆಶ್ರಯದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ಕನ್ನಡ ಸೇವಾ ಸಂಘ ಪಾವಾಯಿ ಇದರ ಬೆಳ್ಳಿ ಹಬ್ಬ ಹಾಗೂ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಗೌರವಾರ್ಥ ಪ್ರಪ್ರಥಮ ಮುಂಬೈ ವಾಪಸಿಗರ ಸಮ್ಮಿಲನ ಕಾರ್ಯಕ್ರಮದಲ್ಲಿ “ತುಳುನಾಡ ರಜತ ಸಿರಿ ರಾಜ್ಯ ಪ್ರಶಸ್ತಿ” ಹಾಗೂ “ತುಳುನಾಡ ರಜತ ಸಂಘ ಸಿರಿ” ಗೌರವ ಪ್ರಶಸ್ತಿ ಪ್ರಧಾನ ಸಮಾರಂಭವು ಶ್ರೀ ಮಹಾಕಾಳಿ ಮತ್ತು ಜನಾರ್ದನ ದೇವಸ್ಥಾನದ ಭವಾನಿ ಮಂಟಪದಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ “ತುಳುನಾಡ ರಜತ ಸಂಘ ಸಿರಿ” ಗೌರವ ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರಿಗೆ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸೇವಾ ಸಂಘ ಪಾವಾಯಿ ಇದರ ಸ್ಥಾಪಕಾಧ್ಯಕ್ಷರಾದ ಡಾ. ಶೇಖರ ಅಜೆಕಾರುರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಮಹಾಕಾಳಿ ಮತ್ತು ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾದ ಡಾ. ನಿ. ಬೀ. ವಿಜಯ […]

ಆತ್ಮಶಕ್ತಿ ವಿವಿದೋಧ್ಧೇಶ ಸಹಕಾರಿ ಸಂಘದ 24 ನೇ ಗಂಜಿಮಠ ಶಾಖೆಯು ಗ್ರಾಮ ಪಂಚಾಯತ್ ಕಟ್ಟಡದ ಮೊದಲ ಮಹಡಿಯಲ್ಲಿ 05.10.2022 ಬುಧವಾರ ನೆರವೇರಿತು.

ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ|ಭರತ್ ಶೆಟ್ಟಿ ಮಾತನಾಡಿ , ಆತ್ಮಶಕ್ತಿ ವಿವಿದೋಧ್ಧೇಶ ಸಹಕಾರಿ ಸಂಘ ಮುಂಚೂಣಿಯಲ್ಲಿ ಇದ್ದು ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿದೆ ಹಾಗೂ ಸಂಘದ ಸಿಬ್ಬಂದಿಗಳ ಸರಳತೆ ಹಾಗೂ ಶಿಸ್ತಿನ ಬಗ್ಗೆ ಶ್ಲಾಘನೆ ಮಾಡಿದರು .ಮುಂದುವರಿದು ಮಾತನಾಡುತ್ತಾ ಸಾಲ ನೀಡುವಿಕೆಯಲ್ಲಿ ಇತರ ಬ್ಯಾಂಕುಗಳಿಗೆ ಹೋಲಿಸಿದರೆ ಸಹಕಾರಿ ಸಂಘಗಳಲ್ಲಿ ಸ್ಪರ್ಧಾತ್ಮಕ ಬೆಳವಣಿಗೆ ಕಾಣಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು. ಮಾತಾ ಅಮೃತಾನಂದಮಯಿ ಮಠ ಬೋಳೂರು, ಮಂಗಳೂರು. ಇದರ ನುರಿತ ತಜ್ಞ ವೈದ್ಯರ ತಂಡದವರಿಂದ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ, ಮಂಗಳೂರು. ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ “ಆತ್ಮ ಶಕ್ತಿ ಸೌಧ”ದ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪಡೀಲ್ ಶಾಖೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಪ್ರಯೋಜನವನ್ನು ಪಡಕೊಂಡಿರುತ್ತಾರೆ. ಸುಮಾರು 90 ಶಿಬಿರಾರ್ಥಿಗಳಿಗೆ ಈ ಸಂದರ್ಭದಲ್ಲಿ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ (ನಿ.)2021-22ನೇ ಸಾಲಿನ 11ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 18.09.2022ರ ಭಾನುವಾರ ಪೂರ್ವಾಹ್ನ 10.30ಕ್ಕೆ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.

ಸಂಘದ 2021-22ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‍ರವರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 23 ಶಾಖೆಗಳನ್ನು ಹೊಂದಿದ್ದು, ಸಂಘದ ಕಾರ್ಯವ್ಯಾಪ್ತಿಯಲ್ಲಿ ಒಟ್ಟು 30 ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.200 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ.160 ಕೋಟಿಗೂ ಮಿಕ್ಕಿ ಸಾಲ ನೀಡುವ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನೋತ್ಸವವನ್ನು ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ” ದಲ್ಲಿ ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆ ಪ್ರಯುಕ್ತ ವಿಶೇಷವಾಗಿ ಸಂಘದ ಸಿಬ್ಬಂದಿಗಳಿಂದ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತದನಂತರ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇವಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರಿ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಮ್., ಶ್ರೀ ದಿವಾಕರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವ ಹಾಗೂ ಬಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು ,ಮಾತಾ ಅಮೃತಾನಂದಮಯಿ ಮಠ, ಬೋಳೂರು, ಮಂಗಳೂರು ಇದರ ನುರಿತ ತಜ್ಞ ವೈದ್ಯರ ತಂಡದವರಿಂದ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ, ಮಂಗಳೂರು, ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ ) ಮಂಗಳೂರು ಹಾಗೂ ಡಾ ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೆಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ, ಮತ್ತು ನೇತ್ರ ತಪಾಸಣಾ ಶಿಬಿರವು ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ” ದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತಾ ಅಮೃತಾನಂದಮಯಿ ಮಠದ ಶಿಬಿರ ಸಂಯೋಜನಾಧಿಕಾರಿ ಡಾ. ಸುಚಿತ್ರ ಕೆ. ರಾವ್ ರವರು ಮಾತನಾಡಿ “ಸ್ವಾಮಿಯವರ ತತ್ವ ಸಂದೇಶಗಳು ಅಜ್ಞಾನಿಗಳಿಗೆ ಜ್ಞಾನ ದೀಪವಾಗಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಜಾಗತೀಕವಾಗಿ ಸ್ವೀಕರಿಸಲ್ಪಟ್ಟಿದೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಅವರು ಭೋಧಿಸಿದ ಉದಾತ್ತ ತತ್ವಗಳು ಜಾತಿ ಮತ ಭೇದವನ್ನು ತೊಡೆದು ಹಾಕುವಲ್ಲಿ ಸಹಾಯಕವಾಗಿದೆ” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ […]

ಸಹಕಾರಿ ಕ್ಷೇತ್ರದ ಸೇವೆಯ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಕಂಡುಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರು ಹಾಗೂ ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ! ಎಮ್ ಎನ್. ರಾಜೇಂದ್ರ ಕುಮಾರ್ ಹೇಳಿದರು.

ರಾಜ್ಯ ಸರ್ಕಾರದ 2021 ನೇ ಸಾಲಿನ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ ನಾಗರಿಕ ಸನ್ಮಾನ ಸಮಿತಿ ವತಿಯಿಂದ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಶುಕ್ರವಾರ ಅಯೋಜಿಸಿದ್ದ `ಚಿತ್ತ ಆತ್ಮಾಭಿನಂದನಾ’ ನಾಗರಿಕ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಶ್ರೀ ಚಿತ್ತರಂಜನ್ ಬೋಳಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಮುನ್ನಡೆದು ನೂರಾರು ಜನರಿಗೆ ಉದ್ಯೋಗ, ಸಾವಿರಾರು ಕುಟುಂಬಗಳಿಗೆ ಅರ್ಥಿಕ ಚೈತನ್ಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ “ಆತ್ಮಶಕ್ತಿ ಮುಂಗಾರು ವಿಶೇಷ ಚಿನ್ನಾಭರಣ ಸಾಲ” ಯೋಜನೆಗೆ ಚಾಲನೆ ನೀಡಲಾಯಿತು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಈ ಸಾಲ ಯೋಜನೆಯ ವಿಶೇಷ ಕೊಡುಗೆಯನ್ನು ಗ್ರಾಹಕರಾದ ಶ್ರೀ ಮನೋಜ್ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಡೀಲ್ ಶಾಖೆಯ ಶಾಖಾಧಿಕಾರಿ ಸಚಿನ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘವು ಗ್ರಾಹಕರ ಮಳೆಗಾಲದ ಆರ್ಥಿಕ ಅವಶ್ಯಕತೆಯನ್ನು ನಿಭಾಯಿಸಲು ವಿಶೇಷ ಬಡ್ಡಿದರದಲ್ಲಿ ಚಿನ್ನಾಭರಣ ಸಾಲವನ್ನು ನೀಡುವುದರ ಜೊತೆಗೆ ವಿಶೇಷ ಕೊಡುಗೆಯನ್ನು ನೀಡುತ್ತಿದೆ. ಸಂಘವು ಕಳೆದ ಎರಡು ವರ್ಷದಲ್ಲಿ ಕೋವಿಡ್ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ 4% ಬಡ್ಡಿದರದಲ್ಲಿ ಚಿನ್ನಾಭರಣ ಸಾಲ ನೀಡಿ ಗ್ರಾಹಕರ ಮುಚ್ಚುಗೆ ಪಡೆದಿರುತ್ತದೆ.