Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಬ್ಯಾಂಕ್‍ನೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಕ್ಕೆ ಅಭಿನಂದಿಸಿ “ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2020-21” ಪ್ರಶಸ್ತಿಯನ್ನು ದಿನಾಂಕ 14.12.2021 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ , ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಬಿ. ನಿರಂಜನ್,ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ರಾಜೇಶ್ ರಾವ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ.ಜೈರಾಜ್ ಬಿ. ರೈ, , ಶ್ರೀ ಕೆ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ನೇಮಿರಾಜ್. ಪಿ ಅವಿರೋಧವಾಗಿ ಪುನರಾಯ್ಕೆಗೊಂಡಿರುತ್ತಾರೆ.

ಸಂಘದ ಆಡಳಿತ ಮಂಡಳಿಯ ಮುಂದಿನ 5 ವರುಷ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್.ಎನ್, ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ.ಪಿ ದಿವಾಕರ, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ ಹಾಗೂ ಶ್ರೀಮತಿ ಉಮಾವತಿ ಇವರುಗಳ ಉಪಸ್ಥಿತಿಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿಯಾದ ಶ್ರೀ ವಿಲಾಸ್ ರವರು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ದ 2020-21ನೇ ಸಾಲಿನ 10ನೇ ವಾರ್ಷಿಕ ಸಾಮಾನ್ಯ ಸಭೆಯು ಘನವೆತ್ತ ಕರ್ನಾಟಕ ರಾಜ್ಯ ಸರಕಾರದ ಆಜ್ನಾನು ಪ್ರಕಾರ ವಿಡಿಯೋ ಕಾನ್ಫರೆನ್ಸ್ / ವರ್ಚುವಲ್ ಮುಖಾಂತರ ದಿನಾಂಕ 01.11.2021ರ ಸೋಮವಾರ ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ 2020-21ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‌ರವರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ “ಸಂಘವು ಪ್ರಸ್ತುತ 19 ಶಾಖೆಗಳನ್ನು ಹೊಂದಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಸಹಿತ 5 ಜಿಲ್ಲೆಗಳಿಗೆ ವ್ಯಾಪಿಸಿರುತ್ತದೆ. ಸಂಘವು 2021-22 ನೇ ಆರ್ಥಿಕ ಸಾಲಿನಲ್ಲಿ ಇಂದಿನವರೆಗೆ ರೂ. 154 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಅದನ್ನು ಮಾರ್ಚ್ ಅಂತ್ಯಕ್ಕೆ ರೂ. 175 […]

ಸಾಮಾಜಿಕ ಕಾರ್ಯಗಳಲ್ಲಿ ಸತತವಾಗಿ 18 ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಸಹಾಯಕರಿಗೆ ಸಹಾಯಧನ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಕೊರೊನಾ ಮಹಾಮಾರಿಯಿಂದ ತೊಂದರೆಗೊಳಗಾಗಿ ಚಿಕತ್ಸೆ ಪಡೆಯುತ್ತಿರುವ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಸಹಾಯಧನ ನೀಡುವ ಕಾರ್ಯಕ್ರಮವು ನಡೆಯಿತು.

ಈ ಸಹಾಯಧನ ನೀಡಲು ಆರ್ಥಿಕ ಸಹಾಯ ನೀಡಿದ ಟ್ರಸ್ಟಿನ ಬಳಗದವರಾದ ಉದ್ಯಮಿ ಶ್ರೀ ಜಯಚಂದ್ರ ಕಜೆಕಾರ್ ಇವರಿಗೆ ದನ್ಯವಾದ ಸಲ್ಲಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಯಮಿ ಸುರೇಶ್ ಕೆ.ಪಿ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ.ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಟ್ರಸ್ಟ್‍ನ ಕಾರ್ಯದರ್ಶಿ ಶ್ರೀ ಗೋಪಾಲ್ ಎಮ್. ಸ್ವಾಗತಿಸಿದರು. ಆತ್ಮಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ ಟ್ರಸ್ಟಿನ ಸ್ಥಾಪಕ ಸದಸ್ಯರಾದ ಶ್ರೀ ವಾಮನ್ ಕೆ. ಇವರು ಪ್ರಾಸ್ತಾವಿಕ ಭಾಷಣ ಮಾಡಿದರು. ಆತ್ಮಶಕ್ತಿ ವಿವಿಧೋದ್ದೇಶ […]

ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು ಇವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್‍ವೆಲ್ ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರವಾಗಿಸಿಕೊಂಡು ಸಹಕಾರ ನಿರ್ವಹಣೆಯಲ್ಲಿ ಉನ್ನತ Diploma (ಹೆಚ್.ಡಿ.ಸಿ.ಎಮ್) ಕೋರ್ಸಿನ ದೂರ ಶಿಕ್ಷಣದ ಪರೀಕ್ಷೆಯಲ್ಲಿ ಉಪ್ಪಿನಂಗಡಿ ವ್ಯವಸಾಯಿಕ ಸಹಕಾರಿ ಸಂಘದ ಸಿಬ್ಬಂದಿ ಶ್ರೀ ಕೀರ್ತನ್ ಯು ಇವರು ಪ್ರಥಮ ಸ್ಥಾನ ,ಜಾಗೃತ ವಿವಿಧೋದ್ಧೇಶ ಸಹಕಾರಿ ಸಂಘದ ಸಿಬ್ಬಂದಿ ಶ್ರೀಮತಿ ಸುಕಲಾಕ್ಷಿ ರವರು ದ್ವಿತೀಯ ಸ್ಥಾನ ಹಾಗೂ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಶ್ರೀ ಉದಯ್ ನಾಯ್ಕ್ ರವರು ತೃತೀಯ ಸ್ಥಾನ ಪಡೆದಿರುತ್ತಾರೆ.

ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯು ಸಹಕಾರಿ ಸಂಘದ ಸಿಬ್ಬಂದಿಗಳ ಪದೋನ್ನತಿಗಾಗಿ ಅವಶ್ಯವಿರುವ ಹೆಚ್‍ಡಿಸಿಎಮ್ ಕೋರ್ಸನ್ನು ದೂರಶಿಕ್ಷಣದ ಮೂಲಕ ನೀಡುತ್ತಿದ್ದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 65 ಶಿಕ್ಷಣಾರ್ಥಿಗಳು ಹೆಚ್‍ಡಿಸಿಎಮ್ 30ನೇ ಅಧಿವೇಶನದಲ್ಲಿ ಪರೀಕ್ಷೆ ಬರೆದಿರುತ್ತಾರೆ. ಪರೀಕ್ಷೆಗಳು ವಿಶ್ವವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ನಡೆದಿದ್ದು ಇದರಲ್ಲಿ 17 ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮತ್ತು 28 ಶಿಕ್ಷಣಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಅವಿಭಜಿತ ಜಿಲ್ಲೆಗಳಿಗೆ ಹೆಮ್ಮೆಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ತರಬೇತಿ ಸಮನ್ವಯ ಅಧಿಕಾರಿ ಹಾಗೂ ಉಪನ್ಯಾಸಕರಾದ ಶ್ರೀ ಸುರೇಶ್ […]

ಮಂಗಳೂರಿನ ಬೆಂದೂರ್‍ವೆಲ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯು ಪಂಜಿಮೊಗರು ಮೊಗೇರ ಸಂಘ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.

ಸ್ಥಳಾಂತರ ಶಾಖೆಯನ್ನು ಉದ್ಘಾಟಿಸಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ವೈ. ಶೆಟ್ಟಿಯವರು ಮಾತನಾಡಿ, ಸಹಕಾರ ಸಂಘದ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕ್ಷೇತ್ರದ ಜನರಿಗೆ ಹೆಚ್ಚಿನ ಬ್ಯಾಂಕಿಂಗ್ ಸೌಲಭ್ಯವನ್ನು ನೀಡುವುದರ ಮೂಲಕ ಜನರ ಜೊತೆಗೆ ಉತ್ತಮ ಭಾಂದವ್ಯ ಹೊಂದಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಡಿಮೆ ಅವಧಿಯಲ್ಲಿ ತನ್ನ 19 ಶಾಖೆಯನ್ನು ತೆರೆದು ಗ್ರಾಹಕರಿಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ ಜನಮನ್ನಣೆ ಗಳಿಸಿದೆ. ಈ ಸಂಘವು ಇನ್ನಷ್ಟು ಉನ್ನತಿ ಪಡೆದು ನೂರಾರು ಶಾಖೆಗಳನ್ನು ತೆರೆದು ಜನಪ್ರಿಯಗೊಳ್ಳಲಿ […]

ಮಂಗಳೂರಿನ ಬೆಂದೂರ್‍ವೆಲ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯು ಪಂಚಾಯತ್ ಆಫೀಸಿನ ಎದುರುಗಡೆ ಇರುವ ಗೋಪಾಲಕೃಷ್ಣ ಬಿಲ್ಡಿಂಗ್‍ಗೆ ಸ್ಥಳಾಂತರಗೊಂಡಿತು.

ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನಿರ್ದೇಶಕರಾಗಿರುವ ಶ್ರೀ ಟಿ. ರಾಜಾರಾಮ್ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಉತ್ತಮ ಸೇವೆ ನೀಡುತ್ತಿರುವ ಆತ್ಮಶಕ್ತಿ ಸಹಕಾರಿಯು ಕೇವಲ 9 ವರ್ಷಗಳಲ್ಲಿ 19 ಶಾಖೆಗಳನ್ನು ಸ್ಥಾಪನೆ ಮಾಡಿರುವ ರಾಜ್ಯದ ಎಕೈಕ ಸಹಕಾರಿ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿನ್ನಾಭರಣ ಸಾಲದಲ್ಲಿ ಗಣನೀಯ ಸಾಧನೆಯನ್ನು ಮಾಡಿರುವ ಸಂಘವು ಜನಸಾಮಾನ್ಯರಿಗೆ ಪ್ರೀತಿ ವಿಶ್ವಾಸದ ಸೇವೆಯನ್ನು ನೀಡುತ್ತಿದ್ದು ಅಮ್ಮೆಂಬಳ ಸಹಕಾರಿ ಸಂಘವು ಆತ್ಮಶಕ್ತಿಯೊಂದಿಗೆ ಅವಿನಾಭಾವ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ 75ನೇ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನಿವೃತ್ತ ಯೋಧ ಶ್ರೀ ದಿವಾಕರ್ ವಿ. ರವರು ಧ್ವಜಾರೋಹಣ ನೆರವೇರಿಸಿ, ದೇಶ ಸೇವೆಯಲ್ಲಿ ತನ್ನ ಅನುಭವವನ್ನು ಹಂಚಿಕೊಳ್ಳುತ್ತಾ ಮಾತನಾಡಿ ಹಿರಿಯರ ತ್ಯಾಗ ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ಕೆಲಸ ನಮ್ಮಿಂದ ಅಗಬೇಕಿದೆ. ಸೇನೆಯಲ್ಲಿ ಹಲವಾರು ಉದ್ಯೋಗವಕಾಶಗಳು ಇದ್ದು, ಯುವ ಪೀಳಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದು ದೇಶ ಸೇವೆ ಮಾಡುವ ಅವಕಾಶದ ಜೊತೆಗೆ ಗೌರವಯುತ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದರು. ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್ ಕೊಂಡಾಣ, ಶ್ರೀ […]

ಮಂಗಳೂರಿನ ಬೆಂದೂರ್‍ವೆಲ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 19ನೇ ತೊಕ್ಕೊಟ್ಟು ಶಾಖೆಯು ಗುರುವಾರ ತೊಕ್ಕೊಟ್ಟುವಿನ ಸನ್‍ಸಿಟಿ ಬಿಲ್ಡಿಂಗ್‍ನಲ್ಲಿ ಆರಂಭಗೊಂಡಿತು.

ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಇವರು ಉದ್ಘಾಟಿಸಿ ಮಾತನಾಡಿ, ಗ್ರಾಹಕರಿಗೆ ಬ್ಯಾಂಕಿನ ರೀತಿಯಲ್ಲಿ ಸೇವೆ ನೀಡುತ್ತಿರುವ ಆತ್ಮಶಕ್ತಿ ಸಹಕಾರಿಯು ಕೇವಲ 10 ವರ್ಷಗಳಲ್ಲಿ 19 ಶಾಖೆಗಳನ್ನು ಸ್ಥಾಪನೆ ಮಾಡಿದ್ದು, 7 ಶಾಖೆಗಳನ್ನು ನನ್ನ ಕ್ಷೇತ್ರದಲ್ಲಿಯೇ ಉದ್ಘಾಟಿಸಿದ ಹೆಮ್ಮೆ ನನಗಿದೆ ಎಂದರು. ಸಂಘವು ಜನಸಾಮಾನ್ಯರಿಗೆ ಪ್ರೀತಿ ವಿಶ್ವಾಸದ ಸೇವೆಯನ್ನು ನೀಡುತ್ತಿದ್ದು, ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದರು. ದೀಪ ಪ್ರಜ್ವಲನೆ ಮಾಡಿ ಚಿನ್ನದ ನೈಜತಾ ಪರೀಕ್ಷಾ ಯಂತ್ರವನ್ನು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ […]