Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಮಂಗಳೂರು, ಬಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ) ವಿದ್ಯಾರಣ್ಯ ಕಲಾವೃಂದ, ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು , ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣೆ, ಉಚಿತ ದಂತ ಚಿಕಿತ್ಸೆ,ಮತ್ತು ಉಚಿತ ಕಣ್ಣಿನ ತಪಾಸಣೆ, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಶಿಬಿರವು ಉಳ್ಳಾಲ ನಗರಸಭೆಯ ಸಮುದಾಯ ಭವನದಲ್ಲಿ ನಡೆಯಿತು.

ಮಲರಾಯ ದೈವಸ್ಥಾನದ ಅರ್ಚಕರಾದ ಶ್ರೀಯುತ ಮುಂಡ ಯಾನೆ ಲತೀಶ್ ಪೂಜಾರಿ ಹಾಗೂ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಅರ್ಚಕರಾದ ಶ್ರೀಯುತ ಕಂಡಪ್ಪ ಕಾನ್ವವರ್ ಶಿಬಿರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಇದರ ಸದುಪಯೋಗವನ್ನು ಹೆಚ್ಚಿನ ಜನರು ಪಡೆದು ಆರೋಗ್ಯ ಪೂರ್ಣ ಜೀವನ ನಡೆಸುವಂತಗಲಿ ಎಂದರು. ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಂಘದ ಬೆಳವಣಿಗೆಯ ಬಗ್ಗೆ ಮಾತನಾಡಿ ನಮ್ಮ ಸಹಕಾರಿ ಸಂಘವು ನಿರಂತರವಾಗಿ ಪ್ರತಿಯೊಂದು ಶಾಖೆಯಲ್ಲಿ ಉಚಿತ ವೈದ್ಯಕೀಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್‍ವೆಲ್ ಮಂಗಳೂರು ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು, ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿತು.

ಈ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಒಟ್ಟು 15 ಜನರಿಗೆ ಕಣ್ಣಿನ ಪೂರೆಯ ಶಸ್ತ್ರ ಚಿಕೆತ್ಸೆಯನ್ನು ಪ್ರಸಾದ್ ನೇತ್ರಾಲಯದಲ್ಲಿ ಉಚಿತವಾಗಿ ನಡೆಸಿದ್ದು, 150 ಜನರಿಗೆ ಉಚಿತವಾಗಿ ಕನ್ನಡಕವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಹಾಗು ನಿಕಟಪೂರ್ವ ಶಾಸಕರಾದ ಶ್ರೀ ಜೆ.ಆರ್ ಲೋಬೋ ಇವರು ವಿತರಿಸಿದರು. ಮುಂದಿನ ದಿನಗಳಲ್ಲಿಯೂ ಇಂತಹ ಶಿಬಿರಗಳ ಸದುಪಯೋಗವನ್ನು ಪಡೆಯುವಂತೆ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ […]

ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆ ,ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ). ಕಾವೂರು, ಯುವವಾಹಿನಿ(ರಿ) ಕೂಳೂರು ಘಟಕ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರ ಇವರ ಜಂಟಿ ಸಹಯೋಗದೊಂದಿಗೆ ಎ ಜೆ ಇನ್ಸ್ಟಿಟ್ಯೂಟ್ of ಮೆಡಿಕಲ್ ಸಾಯನ್ಸ್ & ರಿಸರ್ಚ್ ಸೆಂಟ್‍ರ್ ಮಂಗಳೂರು ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ರಮವು ದಿನಾಂಕ 23.02.2020ರಂದು ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣ ವಿದ್ಯಾನಗರ ಪಂಜಿಮೊಗರು ಇಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ತಮ್ಮ ದಿನ ನಿತ್ಯದ ಕಾರ್ಯಗಳನ್ನು ಬದಿಗಿರಿಸಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ರೀತಿಯ ಶಿಬಿರಗಳಿಂದ ಸ್ಥಳೀಯರಿಗೆ ಆರೋಗ್ಯದ ಮಾಹಿತಿಯೊಂದಿಗೆ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ದೊರೆಯುತ್ತಿರುವುದು ಉತ್ತಮ ಕಾರ್ಯವೆಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೆನೆಪಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ|| […]

ಭಾರತೀಯ ರಿಸವ್ ಬ್ಯಾಂಕ್‍ನ ನಿರ್ದೇಶಕರಾದ ಶ್ರೀ ಸತೀಶ್ ಮರಾಠೆ ಇವರು ಸಹಕಾರ ರಂಗದಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಣಕಾಸು ವಿನಿಯೋಗ ಮತ್ತು ಸಾಲ ನೀಡುವ ವಿಧಾನದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ Campco ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ,ದ.ಕ. ಜಿಲ್ಲಾ ಮಹಿಳಾ ಬ್ಯಾಂಕ್‍ನ ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್, ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರಿ ವಾಮನ್ ಪಿ., ಶ್ರೀ ಸೀತಾರಾಮ್ ಎನ್., ಶ್ರೀ ಚಂದ್ರಹಾಸ ಮರೋಳಿ, ಶ್ರೀ ಸುರೇಶ್ ವಿ ಪೂಜಾರಿ ಹಾಗೂ ಮುಖ್ಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂರ್ ವೆಲ್, ಮಂಗಳೂರು ಇದರ 8ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಗರದ ಹಂಪನಕಟ್ಟೆಯ NGO ಬಿಲ್ಡಿಂಗ್‍ನ ನಂದಿನಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ,ಶ್ರೀ ಕೃತೀಶ್ ಕುಮಾರ್, ಶ್ರೀ ಮಹಾಬಲ ಪೂಜಾರಿ, ಶ್ರೀ ಸೋಮಶೇಖರ ದೇರೆಬೈಲ್, ಶ್ರೀ ಎಸ್.ಎಸ್ ಪೂಜಾರಿ, ಶ್ರೀ ಸಾಧು ಪೂಜಾರಿ, ಶ್ರೀ ರಂಜನ್ ಕುಮಾರ್ ಹಾಗೂ ಶ್ರೀ ಜಾರ್ಜ್ ರೋಡ್ರಿಗಸ್ ಇವರುಗಳು ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಸಂಘದ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಇವರು ಮಾತನಾಡಿ ಸಂಘವು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತಿದ್ದು, ಅತೀ ಕಡಿಮೆ ಅವಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುವುದರ ಜೊತೆಗೆ ಪಡೀಲಿನಲ್ಲಿ ಸಂಘದ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಶಿಲಾನ್ಯಾಸ ನೆರವೇರಿಸಿರುವುದನ್ನು ಪ್ರಶಂಶಿಸಿದರು. ಸಂಘದ ಇನ್ನೋರ್ವ ಸದಸ್ಯರಾದ ಶ್ರೀ ಅಶೋಕ್ ಕುಮಾರ್ ಮಾತನಾಡಿ ಸಂಘದ ಸರ್ವತೋಮುಖ ಪ್ರಗತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂಘದ ಹಿರಿಮೆಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು. ಸಂಘವು ಇನ್ನೂ ಹೆಚ್ಚು ವ್ಯವಹಾರವನ್ನು ವಿಸ್ತಾರ ಮಾಡಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಬೆಂದೂರ್ ವೆಲ್ ಶಾಖೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಜಪ್ಪಿನಮೊಗರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು, ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ, ಉಚಿತ ಕಣ್ಣಿನ ತಪಾಸಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮವು ಬ್ರಹ್ಮಶ್ರೀನಾರಾಯಣಗುರು ಸೇವಾ ಸಂಘ(ರಿ.) ಜಪ್ಪಿನಮೊಗರು, ಇದರ ಅಧ್ಯಕ್ಷರಾದ ಶ್ರೀ ಜೆ. ದಿನೇಶ್ ಅಂಚನ್ ಇವರ ಅಧ್ಯಕ್ಷತೆಯಲ್ಲಿ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಮಾತಾ ಅಮೃತಾನಂದಮಯಿ ಮಠದ ವ್ಯೆದ್ಯರ ತಂಡದ ಡಾ! ದೇವದಾಸ್, ಮಾತಾ ಅಮೃತಾನಂದಮಯಿ ಮಠವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ವ್ಯೆದ್ಯಕೀಯ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ, ಜೊತೆಗೆ ಹಲವಾರು ಅಶಕ್ತ ರೋಗಿಗಳಿಗೆ ಶಸ್ತ್ರಚಿಕೆತ್ಸೆಯನ್ನು ಮಾಡಿಸುತ್ತಾ ಬಂದಿದೆ. ಇಂತಹ ಶಿಬಿರಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ತುಂಬಾ ಪ್ರಯೋಜನವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ರಹ್ಮಶ್ರೀನಾರಾಯಣಗುರು ಸೇವಾ ಸಂಘ(ರಿ.) ಜಪ್ಪಿನಮೊಗರು, ಇದರ ಅಧ್ಯಕ್ಷರಾದ ಶ್ರೀ ಜೆ. ದಿನೇಶ್ ಅಂಚನ್ ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ […]

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ನಡೆದ 71 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಸಂಘ ಸಂಸ್ಥೆ ಕ್ಷೇತ್ರದಲ್ಲಿ ಅನುಪಮ ಸಾಧನೆಯನ್ನು ಮಾಡಿದ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ನೀಡಿ ಗೌರವಿಸಿದರು.

ಈ ಸಮಾರಂಭದಲ್ಲಿ ಶಾಸಕರಾದ ಯು.ಟಿ.ಖಾದರ್, ಡಾ! ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ, ಭೋಜೇಗೌಡ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ವಾಮನ್ ಕೆ., ಶ್ರೀ ಜಿ. ಪರಮೇಶ್ವರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಡಳಿತ ಕಚೇರಿ ಹಾಗೂ ಹಾಸ್ಟೆಲ್ ಕಟ್ಟಡ ‘ಆತ್ಮಶಕ್ತಿ ಸೌಧ’ಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಪಡೀಲ್ ಬಳಿ ಇರುವ ಬೈರಾಡಿಕೆರೆಯ ಸಮೀಪ ಶುಕ್ರವಾರ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಪೂಜಾರಿ, ಈಗ ನಾನು ಪಿಂಚಣಿ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇನೆ. ಆರ್ಥಿಕವಾಗಿ ನಾನು ಅಷ್ಟೊಂದು ಸಬಲನಲ್ಲ. ಆದ್ದರಿಂದ ನನ್ನ ಪುತ್ರ ಸಂತೋಷ್ ಪೂಜಾರಿ ಈ ಕಟ್ಟಡದ ಕೆಲಸಕ್ಕೆ 5 ಲಕ್ಷ ರು. ಧನಸಹಾಯ ಮಾಡಲಿದ್ದಾರೆ ಎಂದರು. ನಾಮಫಲಕ ಬಿಡುಗಡೆಗೊಳಿಸಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಆತ್ಮಶಕ್ತಿ ಸಹಕಾರ ಸಂಘ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂದೆ ಸಾಗುತ್ತಿದೆ. ಸಂಘವು 100 ಶಾಖೆಗಳನ್ನು ಹೊಂದುವ ಮೂಲಕ ಮೇಲ್ದರ್ಜೆಗೆ ಏರಲಿ ಎಂದು ಆಶಿಸಿದರು. ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ದ.ಕ ಜಿಲ್ಲೆ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ0ಘ (ನಿ) ಬಿ.ಸಿ ರೋಡ್ ಶಾಖೆ ಇದರ 7ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಶ್ರೀ ರಮಾನಾಥ ಕಾರಂದೂರು, ಶ್ರೀ ರೋನಾಲ್ಡ್ ಡಿ’ಸೋಜ ಮತ್ತು ಶ್ರೀಮತಿ ಪ್ರೇಮರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಗ್ರಾಹಕರಾದ ಶ್ರೀ ರೋನಾಲ್ಡ್ ಡಿ’ಸೋಜರವರು “ಸಂಘದ ಸಿಬ್ಬಂದಿಗಳ ಶೀಘ್ರ ಹಾಗೂ ನಗು ಮೊಗದ ಸೇವೆ ಮತ್ತು ಆಡಳಿತ ಮಂಡಳಿಯವರ ಭಾವನಾತ್ಮಕ ಸೇವೆಯಿಂದ ಗ್ರಾಹಕರ ವ್ಯವಹಾರಕ್ಕೆ ಬಹಳ ಸಹಕಾರಿಯಾಗಿದೆ. ಈ ಸೇವೆ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಸಿಗುತ್ತಿದೆ” ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘವು ಮಾಡಿರುವ ಸಾಧನೆ ಹಾಗೂ ಸಂಘವು ತಮ್ಮ ಗ್ರಾಹಕರಿಗೆ ನಿರಂತರವಾಗಿ ಆಯ್ದ ಸರಕಾರಿ ರಜಾ ದಿನಗಳಲ್ಲೂ ಇ-ಸ್ಟ್ಯಾಂಪ್ ಸೇವೆಯನ್ನು […]

ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಪ್ರಶಸ್ತಿ ಪ್ರಧಾನ ಸಮಾರಂಭವು ಡಿಸೆಂಬರ್ 25ರಂದು ಪ್ರಬೋಧಂಕರ್ ಥಾಕ್ರೆ ಆಡಿಟೋರಿಯಂ, ಮುಂಬೈ ಯಲ್ಲಿ ಅಂತರಾಷ್ರೀಯ ಮಾನವ ಹಕ್ಕುಗಳು ಪೀಪಲ್ಸ್ ಕೌನ್ಸಿಲ್ ಇದರ ಅಧ್ಯಕ್ಷರಾದ ಲಯನ್ ಡಾ. ಶಂಕರ್ ಕೆ. ಶೆಟ್ಟಿ, ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಅನಿವಾಸಿ ಭಾರತೀಯ ಹಾಗೂ ಬಹರೈನ್ ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರಾದ ಶ್ರೀ ಲೀಲಾದರ್ ಬೈಕಂಪಾಡಿ ಇವರು ಉದ್ಘಾಟಿದರು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಅಂತರಾಷ್ರೀಯ ಮಾನವ ಹಕ್ಕುಗಳ ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ […]