ಈ ಕಾರ್ಯಕ್ರಮವನ್ನು ಸಾಮರಸ್ಯ ಬಳಗ, ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ ದಿನನಿತ್ಯ ಮಹಿಳೆಯನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ ೯೫% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ” ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ನ್ಯಾಯವಾದಿಗಳು ಹಾಗೂ ಪದವು ವ್ಯವಸಾಯ […]








