Blog

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಬೆಂಗಳೂರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಮಂಗಳೂರು ಇವರ ಸಹಯೋಗದೊಂದಿಗೆ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ,ಚಿಕ್ಕಮಗಳೂರು ,ಉಡುಪಿ,ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಹಾಗೂ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಭಾಂಗಣ “ಆತ್ಮಶಕ್ತಿ ಸೌಧ”, ಪಡೀಲ್ ಮಂಗಳೂರು ಇಲ್ಲಿ ನಡೆಸಲಾಯಿತು.

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಕೆ. ಹರೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪ್ರಗತಿಗೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊಡುಗೆ ಅಪಾರವಾದುದ್ದು, ಸಾಲ ವಸೂಲಾತಿಯಲ್ಲಿ ಮುಂಚೂಣಿಯಲ್ಲಿದ್ದರೆ ಮಾತ್ರ ಸಂಘ ಲಾಭದಾಯಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಇಂತಹ ಕಾರ್ಯಗಾರವನ್ನು ಆಯೋಜಿಸಿದ್ದಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಲಾಲ್‌ಬಾಗ್ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ.) ಕುದ್ರೋಳಿ ಮಂಗಳೂರು ಇವರ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವರ ನುರಿತ ವೈದ್ಯರ ತಂಡದೊAದಿಗೆ ಉಚಿತ ನೇತ್ರಾ ತಪಾಸಣಾ ಶಿಬಿರವು ದಿನಾಂಕ ೨೦-೦೧-೨೦೨೪ ರ ಆದಿತ್ಯವಾರದಂದು ಕುದ್ರೋಳಿ ಯುವಕ ಸಂಘದ ಕಟ್ಟಡದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಸಿವಿಲ್ ಇಂಜಿನಿಯರ್ ಆದ ಶ್ರೀಯುತ ನಿತಿನ್ ಭಟ್ ಇವರು ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಆರೋಗ್ಯದ ಕಾಳಜಿಂiÀನ್ನು ವಹಿಸುವುದು ತುಂಬಾ ಉತ್ತಮ. ಕೆಲಸದ ಒತ್ತಡದಲ್ಲಿ ಆರೋಗ್ಯದ ಕಡೆಗೆ ಗಮನ ಕೊಡದೆ ಇರುವುದು ಹಲವು ರೋಗಗಳಿಗೆ ಕಾರಣವಾಗಿದೆ. ನಾವು ನಮ್ಮ ಆರೋಗ್ಯದ ನಿರ್ವಹಣೆಯತ್ತ ತುಸು ಸಮಯವನ್ನು ಮೀಸಲಿಡುವುದು ತುಂಬಾ ಅಗತ್ಯ. ಇದರಿಂದಾಗಿ ನಾವು ಆರೋಗ್ಯದಿಂದಿರಲು ತುಂಬಾ ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘವು ಈಗಾಗಲೇ ಒಟ್ಟು ೫೯ ಶಿಬಿರವನ್ನು ಆಯೋಜಿಸಿದ್ದು , ೬೦ನೇ ಶಿಬಿರವು ಇದಾಗಿದೆ ಎಂದರು. ಕೇವಲ ಶಿಬಿರವನ್ನು ಮಾತ್ರವಲ್ಲದೆ ಶಿಬಿರಾರ್ಥಿಗಳಿಗೆ ಕೂಡಾ ಅಗತ್ಯ ಸಂದರ್ಭದಲ್ಲಿ ವಿವಿಧ ಸೌಲಭ್ಯಗಳನ್ನು ನೀಡಿ ಈಗಾಗಲೇ ೨೨ ಸಾವಿರಕ್ಕೂ ಮಿಕ್ಕಿ ಜನರು ಶಿಬಿರದ ಪ್ರಯೋಜನೆ ಪಡೆಯುವುದರ ಜೊತೆಯಲ್ಲಿ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ೪೩೫ಕ್ಕೂ ಹೆಚ್ಚು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ರೋಟರಿ ಕ್ಲಬ್ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ ಹಾಗೂ ಭಾರತಿಯ ಅಂಚೆ ಇಲಾಖೆ- ಪುತ್ತೂರು ವಿಭಾಗದ ಸಹಯೋಗದೊಂದಿಗೆ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ದಿನಾಂಕ ೧೩.೦೧.೨೦೨೪ರ ಶನಿವಾರದಂದು ಶ್ರೀ ದುರ್ಗಾ ಕಾಂಪ್ಲೆûûಕ್ಸ್ (ಆಶೀರ್ವಾದ್ ಸಭಾಂಗಣ) ಮಡಂತ್ಯಾರು ಇಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಡಾ|| ಅಶಿತ್ ಪ್ರೊಫೆಸರ್, ಡಿಪಾರ್ಟ್ಮೆಂಟ್ ಆಫ್ ಒರ್ಥೊಡೊಂಟಿಸ್ಟ್ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು. ಸಮಾಜದ ಜನರು ಯಾವುದೇ ರೋಗ ಬರುವವರೆಗೆ ಕಾಯಬಾರದು ಅದಕ್ಕೂ ಮುನ್ನ ಖಾಯಿಲೆಯ ಬಗ್ಗೆ ಮುನ್ನೆಚ್ಚರಿಗೆ ವಹಿಸಿ ಇಂತಹ ಶಿಬಿರದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪುತ್ತೂರು ಶಾಖೆಯ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಪುತ್ತೂರು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀ ಎಸ್ ರಾಧಕೃಷ್ಣಾ ನಾಯಕ್, ಶ್ರೀ ವಸಂತ ಬಿ ಪೂಜಾರಿ, ಶ್ರೀ ಎನ್ ಗೋಪಾಲಕೃಷ್ಣಾ ಆಚಾರ್, ಶ್ರೀ ಚಿದಾನಂದ ಬೈಲಾಡಿ ಇವರುಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಎನ್ ಗೋಪಾಲಕೃಷ್ಣಾ ಆಚಾರ್ ರವರು ಮಾತನಾಡಿ ಸಂಘದ ಗ್ರಾಹಕರ ಸಭೆಗೆ ಶುಭವನ್ನು ಹಾರೈಸಿ ಸಂಘವು ಕಡಿಮೆ ಅವಧಿಯಲ್ಲಿ ಹೆಚ್ಚು ಶಾಖೆಯನ್ನು ಹೊಂದಿದ್ದು ಇದು ಅಧ್ಯಕ್ಷರ, ಆಡಳಿತ ಮಂಡಳಿಯ ಹಾಗೂ ಸಿಬ್ಬಂದಿಗಳ ಶ್ರಮ ಮತ್ತು ಸಾಮರ್ಥ್ಯದಿಂದ ಸಾಧ್ಯವಾಗಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾರ್ವಜನಿಕ ಸೇವೆ ನೀಡಿ ಸಂಘವು ಹೆಚ್ಚು ಬೆಳವಣಿಗೆ ಹೊಂದಲಿ ಎಂದು ಸಂಘಕ್ಕೆ ಶುಭ ಹಾರೈಸಿದರು. ಸಂಘದ ಸದಸ್ಯರಾದ ಶ್ರೀ ಎಸ್ ರಾಧಕೃಷ್ಣಾ ನಾಯಕ್ ರವರು ಮಾತನಾಡಿ, ಶಾಖೆಯು ಐದು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ವರದರಾಜ್ ಎಮ್, ಶ್ರೀ ಕೈಲಾರ್ ರಾಜಗೋಪಲ್ ಭಟ್, ಶ್ರೀ ಜೀವನ್ ಇವರುಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಕೈಲಾರ್ ರಾಜಗೋಪಾಲ್ ಭಟ್‌ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಸಂಘ ದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಪಾದರಸದಂತೆಯೇ ಇದ್ದು ಸಂಘ ಸಿಬ್ಬಂದಿಗಳು ಕೂಡ ಇದೇ ರೀತಿ ಪಾದರಸದಂತೆ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು. ಸಂಘದಿAದ ಹಲವಾರು ಜನಪಯೋಗಿ ಕೆಲಸಗಳು ಆಗುತಿದ್ದು ಸಂಘವು ಕಷ್ಟ ಕಾಲದಲ್ಲಿ ಜನರ ಸಮಸ್ಯೆಗೆ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ, ಶ್ರೀ ವಿಶ್ವನಾಥ ಪೂಜಾರಿ, ಶ್ರೀ ಶ್ರೀಧರ್ ಭಟ್, ಶ್ರೀ ತಿಮ್ಮಪ್ಪ ಗೌಡ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಸದಾನಂದ ಪೂಜಾರಿ ಯವರು ಮಾತನಾಡಿ ಸಂಘವು ಗ್ರಾಹಕರ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ವಿಶಿಷ್ಟ ರೀತಿಯ ಯೋಜನೆಗಳನ್ನು ರೂಪಿಸಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಸಂಘದ ಸದಸ್ಯರಾದ ಶ್ರೀ ಶ್ರೀಧರ್ ಭಟ್ ರವರು ಮಾತನಾಡಿ ಪಾಲು ಬಂಡವಾಳ ಜಾಸ್ತಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೊಟ್ಟಾರ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಜಯರಾಮ್ ಕಾರಂದೂರು, ಶ್ರೀಮತಿ ರಮಣಿ ಕೆ,ಶ್ರೀ ಪಿ ಸುರೇಶ್, ಶ್ರೀ ಬಿ ಜಯರಾಮ್,ಶ್ರೀಮತಿ ಶುಭ ರಾಜೇಂದ್ರ,ಶ್ರೀ ಎಚ್ ಜನಾರ್ಧನ ಗಡಿಯಾರ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಜಯರಾಮ್ ಕಾರಂದೂರು ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಶಾಖೆಯನ್ನು ತೆರೆಯುವಲ್ಲಿ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಹಾಗೂ ಆಡಳಿತ ಮಂಡಳಿಯ ಪ್ರಯತ್ನವನ್ನು ಶ್ಲಾಘಿಸಿದರು. ೨೦೨೩ ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಂಘದ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಸಂಘದ ಸದಸ್ಯರಾದ ಶ್ರೀಮತಿ ರಮಣಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2024ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಾಸುದೇವ ಶಾಂತಿ ಹಾಗೂ ಮ್ಯಾನೇಜರ್ ಶ್ರೀ ಜೆ. ಕಿಶೋರ್ ಮಜಿಲರವರು ಸಂಘದ 2024ರ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್., ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅರ್ಚಕರಾದ ಶ್ರೀ ಗುರುಪ್ರಸಾದ್ ಶಾಂತಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಮತ್ತಿತ್ತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್‌ನ ಸಹಭಾಗಿತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್ ಮುಕ್ಕ ಇಲ್ಲಿಯ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 28 ರಂದು ಉಚಿತ ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಿತು.

ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘದ ಪ್ರತೀ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದ್ದು, ಈಗಾಗಲೇ ಸಂಘವು ಈಗಾಗಲೇ 58 ಶಿಬಿರಗಳನ್ನು ಆಯೋಜಿಸಿದೆ. ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸಹಕರಿಸಿದ ರೋಟರಿ ಕ್ಲಬ್ ಕಾಪು ಇವರಿಗೆ […]

ದಿನಾಂಕ ನವೆಂಬರ್ 1 ರಂದು ನಗರದ ಕೇಂದ್ರ ಮೈದಾನದಲ್ಲಿನಡೆದ ದ.ಕ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರಕ್ಕೆ ದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ 2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ದಿನೇಶ್ ಗುಂಡುರಾವ್‌ರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ,ಮಂಗಳೂರು ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕರಾದ ಶ್ರೀ ಪ್ರವೀಣ್ ಚಂದ್ರ ಆಳ್ವರವರ ಉಪಸ್ಥಿತಿಯಲ್ಲಿ ನೀಡಿ ಗೌರವಿಸಲಾಯಿತು.

ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರು ಆಗಿರುವ ಶ್ರೀಯುತ ಚಿತ್ತರಂಜನ್ ಬೋಳಾರ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದನ್ನು ಸ್ಥಾಪಿಸಿ, ಆಡಳಿತ ಮಂಡಳಿಯ ಸ್ಥಾಪಕಧ್ಯಕ್ಷರಾಗಿ ಪಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯವಾದದ್ದು , ಅವರ ಕ್ರೀಯಶೀಲತೆಯಿಂದಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಳೆದ ಹತ್ತು ವರ್ಷಗಳಲ್ಲಿ 30 ಶಾಖೆಗಳನ್ನು ಹೊಂದಿದ್ದು ನೂರಕ್ಕೂ ಅಧಿಕ ಮಂದಿಗೆ ಉದ್ಯೋಗ ಕಲ್ಪಿಸಿ ರೂ .2000 ಕೋಟಿಗೂ ಮಿಕ್ಕಿ ವ್ಯವಹಾರವನ್ನು ಮಾಡಿರುವುದು ಸಹಕಾರ ರಂಗದಲ್ಲಿ ಅಪರೂಪದ ಸಂಗತಿ . […]