ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ವ್ಯ.ಸೇ.ಸ. ಸಂಘದ ಅಧ್ಯಕ್ಷ ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಐಕಳಭಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಅಲ್ಪಾವಧಿಯಲ್ಲಿಯೇ 30 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು ರಾಜ್ಯಕ್ಕೆ ಮಾದರಿಯಾದ ಸಂಸ್ಥೆಯಾಗಿ ಮೂಡಿಬರುತ್ತಿದೆ. ಬ್ಯಾಂಕಿOಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು ಕಾಪುವಿನ ಜನತೆಯ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಕಾಪು ಹೊಸ ಮಾರಿಗುಡಿ ದೇವಸ್ಥಾನದ […]
