Blog

ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಜಪ್ಪಿನಮೊಗರು ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ಮೆಗಾ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ, ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಬ್ರಹ್ಮಶ್ರೀ ನಾರಾಯಣಗುರು ಮಂದಿರ , ಜಪ್ಪಿನಮೊಗರು ಇಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಅಂಗವಾಗಿ ನಡೆದ ಗ್ರಾಹಕ ಸಭೆ ಹಾಗೂ ಸಿಬ್ಬಂದಿಗಳಿಗೆ ಸಾಧನಾ ಪ್ರಶಸ್ತಿ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ಪಡೀಲ್ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಮಾಧವ ಸುವರ್ಣ, ಶ್ರೀ ಕೃಷ್ಣಪ್ಪ ಗೌಡ ಪಡ್ಡಂಬೈಲ್, ಶ್ರೀ ಯಶವಂತ ಪೂಜಾರಿ, ಶ್ರೀ ಕೃಷ್ಣಪ್ಪ ಪೂಜಾರಿ ಎಮ್ ಹಾಗೂ ಶ್ರೀ ಗೋಪಾಲ ಇವರುಗಳು ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಸಂಘದ ಹಿರಿಯ ಸದಸ್ಯರಾದ ಶ್ರೀ ಕೃಷ್ಣಪ್ಪ ಪೂಜಾರಿ ಎಮ್. ಹಾಗೂ ಶ್ರೀ ಟಿಪೇಶ್ ಇವರು ಮಾತನಾಡಿ ಸಂಘದ ವ್ಯವಹಾರದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಘವು ಇನ್ನೂ ಹೆಚ್ಚು ವ್ಯವಹಾರವನ್ನು ವಿಸ್ತಾರ ಮಾಡಿ ಹೆಚ್ಚಿನ ಶಾಖೆಗಳನ್ನು ತೆರೆದು ಅಭಿವೃದ್ಧಿ ಹೊಂದುವಂತಾಗಲಿ ಹಾಗೂ ಸಂಘದ ಸಿಬ್ಬಂದಿ ವರ್ಗದ ಉತ್ತಮ ಸೇವೆಯನ್ನು ಹಾಗೂ ನಿರ್ದೇಶಕ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಬೆಳವಣಿಗೆಗೆ ಸಹಕಾರ […]

ಆತ್ಮಶಕ್ತಿ ಕರಾವಳಿಯಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಒಂದು ಮಾದರಿ ಸಂಸ್ಥೆ. ಆದ್ದರಿಂದ ಸಂಸ್ಥೆಯ ಬಗ್ಗೆ ಆರಂಭದಿಂದಲೂ ಗೌರವ ಭಾವನೆಯಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಕೆಲಸಗಳನ್ನು ಮುಂದುವರಿಸಬೇಕು ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಶ್ರೀ ಬಿ. ಜನಾರ್ಧನ ಪೂಜಾರಿ ಹೇಳಿದರು.

ಪಡೀಲ್‍ನ ಆತ್ಮಶಕ್ತಿ ಸೌಧÀದಲ್ಲಿ ರವಿವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ದಶ ಸಂಭ್ರಮದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆತ್ಮಶಕ್ತಿಯಿದ್ದರೆ ಮಾತ್ರ ಮನುಷ್ಯ ಜೀವನದಲ್ಲಿ ಮುಂದೆ ಬರಲು ಸಾಧ್ಯ ಆದ್ದರಿಂದ ಹೆಸರಿಗೆ ಪೂರಕವಾಗಿ ಸಂಸ್ಥೆ ಜನರ ಪಾಲಿಗೂ ಆತ್ಮಶಕ್ತಿಯಾಗಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಂಸ್ಥೆ ವತಿಯಿಂದ ಪಡೀಲ್‍ನಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ತಂಗುದಾಣ ಉದ್ಘಾಟಿಸಿದರು. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. […]

ಗ್ರಾಮೀಣ ಪ್ರದೇಶಗಳು ಈಗ ಬೃಹತ್ ವೇಗದಲ್ಲಿ ಮತ್ತು ಪ್ರತಿಯೊಂದು ಅಂಶದಲ್ಲೂ ಅಭಿವೃದ್ಧಿ ಹೊಂದುತ್ತಿವೆ. ಸಹಕಾರಿ ಸಂಘಗಳು ಇದರಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಗ್ರಾಮೀಣ ಅಭಿವೃದ್ಧಿಯನ್ನು ಬೆಂಬಲಿಸಲು, ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಸಂಘವು ಪರಸ್ಪರ ಸಹಾಯ ಮತ್ತು ಸ್ವ-ಸಹಾಯದ ಕಲ್ಪನೆಯನ್ನು ಅನುಸರಿಸುತ್ತದೆ. ಆತ್ಮಶಕ್ತಿ ಸಹಕಾರಿ ಸಂಘದ ಸೇವೆ ಬ್ಯಾಂಕಿಗೆ ಮಾತ್ರ ಸೀಮಿತವಲ್ಲದೇ ಸಾಮಾಜಿಕವಾಗಿ ಮುಂದುವರಿದಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಹೇಳಿದರು.

ಅವರು ಅಳದಂಗಡಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 28 ನೇ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು 2012 ರ ಜನವರಿ 30 ರಂದು ನಮ್ಮ ಸಂಘದ ಪ್ರಥಮ ಶಾಖೆಯನ್ನು ಮಾಜಿ ಕೇಂದ್ರ ಸಚಿವರು, ಹಿರಿಯರಾದ ಜನಾರ್ದನ ಪೂಜಾರಿಯವರು ಉದ್ಘಾಟಿಸಿ ಇಂದು ಅಲ್ಪಾವಧಿಯಲ್ಲೇ ಉಭಯ ಜಿಲ್ಲೆಯಲ್ಲಿ ಜನ ಉಪಯೋಗಕ್ಕಾಗಿ 28 ಶಾಖೆಗಳನ್ನು ಆರಂಭಿಸಿದ್ದೇವೆ. ಇದೆಲ್ಲಾ ಪ್ರತಿಯೋರ್ವರ ಶ್ರಮದಿಂದ ನಡೆದಿದೆ ಎಂದರು. ನೂತನ ಶಾಖೆಯನ್ನು ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಉದ್ಘಾಟಿಸಿ ಮಾತನಾಡಿ ನಮ್ಮ […]

ಸಹಕಾರಿ ಸಂಸ್ಥೆಗಳು ಗುಣಮಟ್ಟದ ಸೇವೆಯಿಂದಲೇ ತಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಶ್ರಮಿಸುತ್ತಿದೆ. ಸಹಕಾರಿ ಸಂಸ್ಥೆಗಳು ಎದುರಿಸುತ್ತಿರುವ ಅನೇಕ ತಾಂತ್ರಿಕ ಸಮಸ್ಯೆಗಳಿಗೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಮತ್ತು ಅವುಗಳ ಪ್ರಗತಿಗೆ ಪೂರಕ ಸಹಕಾರ ನೀಡಲು ಗಮನ ಹರಿಸಬೇಕು ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು.

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 27ನೇ ಶಾಖೆಯನ್ನು ಮಡಂತ್ಯಾರಿನ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಉದ್ಟಾಟಿಸಿ ಮಾತನಾಡಿದರು. ಸಂಘವು ದಶಮಾನೋತ್ಸವ ಆಚರಿಸುತ್ತಿರುವ ವೇಳೆ 27ನೇ ಶಾಖೆ ತೆರೆದು ಜನಮನ್ನಣೆ ಗಳಿಸಿದೆ. ಸಿಬ್ಬಂದಿಯ ಪ್ರಾಮಾಣಿಕ ಸೇವೆ ಗ್ರಾಹಕರಲ್ಲಿ ವಿಶ್ವಾಸ ಮೂಡಿಸುವಂತೆ ಮಾಡಿದೆ. ಭವಿಷ್ಯದಲ್ಲಿ ಇನ್ನಷ್ಟು ಶಾಖೆ ತೆರೆಯುವ ಶಕ್ತಿ ನೀಡಲಿ ಎಂದರು. ಗಣಕ ಯಂತ್ರ ಉದ್ಟಾಟಿಸಿದ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ ಸಿಂಹ ನಾಯಕ್ ಮಾತನಾಡಿ, ಈ ಸಂಘವು ತನ್ನ ಸೇವಾ ತತ್ಪರತೆಯಿಂದ ಭವಿಷ್ಯದ ನಂಬಿಕಾರ್ಹ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 26ನೇ ಶಾಖೆ ಕೊಟ್ಟಾರದ ನಾರಾಯಣಗುರು ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು. ಮೇಯರ್ ಜಯಾನಂದ ಅಂಚನ್ ಅವರು ಕಚೇರಿ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಲ್ಲೂ ಹೆಸರು ಪಡೆದಿದೆ. ಸಂಘ ತನ್ನ ವ್ಯಾಪ್ತಿ ಇನ್ನಷ್ಟು ವಿಸ್ತರಿಸಿಕೊಂಡು ದೇಶದಲ್ಲಿದೆ ಹೆಸರು ಪಡೆಯುವಂತಾಗಲಿ ಎಂದು ಹಾರೈಸಿದರು.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ತಂತ್ರಿಗಳಾದ ದೇರೆಬೈಲು ವೇದಮೂರ್ತಿ ವಿಠಲ ದಾಸ ತಂತ್ರಿಯವರು ದೀಪ ಬೆಳಗಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ಮತ್ತು ಜೀವಿತಾವಧಿಯ ಮಾರ್ಗದರ್ಶನದ ಮಾತುಗಳು ಆತ್ಮಶಕ್ತಿಗೆ ಇನ್ನಷ್ಟು ಶಕ್ತಿ ಕೊಟ್ಟಿದೆ ಎಂದರು. ಮಾಜಿ ಮೇಯರ್, ಮಾಜಿ ಮೇಯರ್ ಪಾಲಿಕೆ ಸದಸ್ಯ ಎಂ ಶಶಿಧರ ಹೆಗ್ಡೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿAಗ್ ಮಾತ್ರವಲ್ಲದೆ ಸಹಕಾರ ಕ್ಷೇತ್ರದ ತವರೂರು ಹೌದು. ಇಂದು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೋಟಿ ನೀಡುತ್ತಾ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ವ್ಯಾಪಿಸುತ್ತಿದೆ. ಆತ್ಮಶಕ್ತಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಕೋ-ಆಪರೇಟರ್ಸ್ ಕ್ಲಬ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಸಹಕಾರಿ ಕ್ರೀಡಾ ಸಂಗಮವು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಮಂಗಳೂರು ಇದರ ಕ್ರೀಡಾಂಗಣದಲ್ಲಿ ಜರುಗಿತು.

ಮಂಗಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಜೆ.ದೇವಾಡಿಗ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಸಂಗಮಕ್ಕೆ ಚಾಲನೆ ನೀಡಿದರು. ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಎ.ಎಸ್. ವೆಂಕಟೇಶ್ ಇವರು ಕ್ರೀಡಾ ಧ್ವಜಾರೋಹಣ ನಡೆಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ […]

ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 25ನೇ ಕಾಪು ಶಾಖೆಯ ಉದ್ಘಾಟನೆ ಸಮಾರಂಭದ ಪ್ರಯುಕ್ತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಯುವ ವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಇದರ ಅಧ್ಯಕ್ಷರಾದ “ಸಹಕಾರ ರತ್ನ” ಡಾ. ಎಂ.ಎನ್. ರಾಜೇಂದ್ರ ಕುಮಾರ್‍ರವರ ಗೌರವ ಉಪಸ್ಥಿತಿಯಲ್ಲಿ ಸಂಘದ ವತಿಯಿಂದ ಗೌರವ ಅಭಿನಂದನಾ ಕಾರ್ಯಕ್ರಮವು ಜರುಗಿತು.

ಮುಖ್ಯ ಅತಿಥಿಗಳಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆ, ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ (ನಿ) ಬೆಂಗಳೂರು ಇದರ ನಿರ್ದೇಶಕರಾದ ಡಾ. ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಕಾಪು ಮಹಾಬಲ […]

ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 25ನೇ ಕಾಪು ಶಾಖೆಯ ಉದ್ಘಾಟನೆ ಸಮಾರಂಭದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.)ನ ಅಧ್ಯಕ್ಷರಾದ “ಸಹಕಾರ ರತ್ನ” ಡಾ. ಎಮ್. ಎನ್.ರಾಜೇಂದ್ರ ಕುಮಾರ್‍ರವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಇದರ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್ ಹಾಗೂ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆರವರ ಗೌರವ ಉಪಸ್ಥಿತಿಯಲ್ಲಿ ಸಂಘದ ವತಿಯಿಂದ ಡಾ. ಎಮ್. ಎನ್. ಆರ್ ರವರಿಗೆ ಆತ್ಮಾಭಿನಂದನೆ ಕಾರ್ಯಕ್ರಮವು ಜರುಗಿತು.

ಮುಖ್ಯ ಅತಿಥಿಗಳಾಗಿ ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ (ನಿ) ಬೆಂಗಳೂರು ಇದರ ನಿರ್ದೇಶಕರಾದ ಡಾ. ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿ, ಕಾಪು ಮಹಾಬಲ ಮಾಲ್ ಆಡಳಿತ ನಿರ್ದೇಶಕ ಶ್ರೀ ಯೋಗಿಶ್ ಶೆಟ್ಟಿ, ಕಾಪು ಬಿಲ್ಲವರ ಸಹಾಯಕ ಸಂಘದ ಮಾಜಿ ಅಧ್ಯಕ್ಷ ಶ್ರೀ ಮಾಧವ ಆರ್. ಪಾಲನ್, ಕಾಪು […]

69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಇದರ ಪ್ರಯುಕ್ತ ದಿನಾಂಕ 18.11.2022 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು,ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್‍ನ ಆತ್ಮಶಕ್ತಿ ತ್ರೈಮಾಸಿಕ ಪತ್ರಿಕೆ ಸಹಕಾರ ಸಪ್ತಾಹದ ವಿಶೇಷಾಂಕವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ). ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಬಿಡುಗಡೆಗೊಳಿಸಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ವೇದವ್ಯಾಸ ಡಿ. ಕಾಮತ್, ಮಂಗಳೂರು ವಿಧಾನ ಸಭಾ ಕ್ಷೇತ್ರ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್, ಕ್ಯಾಂಪ್ಕೋ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಕೊಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.) […]