Blog

ಮಂಗಳೂರು ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ 25ನೇ ನೂತನ ಕಾಪು ಶಾಖೆಯನ್ನು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮರಾಟ ಮಹಾಮಂಡಳದ ಅದ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಭಾನುವಾರ ಶಾಖೆಯನ್ಜು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದು ಆರಂಭಗೊಂಡ ಕೇವಲ 10ವರ್ಷದಲ್ಲಿಯೇ 25ನೇ ಶಾಖೆಯನ್ನು ಕಾಪುವಿನಲ್ಲಿ ತೆರೆಯುವ ಮೂಲಕ ಜನರ ಪ್ರೀತಿ ವಿಶ್ವಾಸಗಳಿಸಿದೆ. ಆ ಮೂಲಕ ಸಹಕಾರ ಕ್ಷೇತ್ರದಲ್ಲಿ ಮಹೋನ್ನತ ಸಾಧನೆಯನ್ನು ಮಾಡಿದಂತಾಗಿದೆ. ಈ ಸಹಕಾರ ಸಪ್ತಾಹದ ಸಂಧರ್ಭದಲ್ಲಿಯೂ ಸಮವಸ್ತ್ರಧಾರಿಗಳಾಗಿ ಪಾಲ್ಗೊಂಡಿದ್ದು ಸಪ್ತಾಹಧ ಮೆರುಗು ನೀಡಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡುವ ಅತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘವು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸೇವೆಯ ಮೂಲಕ ಜನ ಮಾನಸದಲ್ಲಿ ಅಚ್ಚಲಿಯದೆ ಉಳಿವಂತಾಗಿದ್ದು,ಇದೀಗ 25ನೇ ಶಾಖೇಯನ್ನು ಕಾಪುವಿನಲ್ಲಿ ತೆರೆಯುವ ಮೂಲಕ ಜನರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಕಾರ್ಯೋನ್ಮುಖವಾಗಿರುವುದು ಶ್ಲಾಘನೀಯ. ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೇ ವಿವಿಧ ಸಾಮಾಜಿಕ ಬದ್ದತೆಯ ಸೇವಾ ಕೆಲಸ ಕಾರ್ಯಗಳಲ್ಲಿಯೂ ಕೈ ಜೋಡಿಸಿ ಎಲ್ಲರ ಮೆಚ್ಚುಗೆ ಪಾತ್ರವಾಗಿದೆ ಎಂದರು. ಮಾಜಿ ಸಚಿವ ವಿನಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ.) ಇವರ ಸಹಯೋಗದಲ್ಲಿ ಕುದ್ರೋಳಿ ಯುವಕ ಸಂಘ, ಕುದ್ರೋಳಿಯಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಜೆ.ಟಿ. ಪ್ರಿಂಟರ್ಸ್‍ನ ಮಾಲಕರಾದ ಶ್ರೀ ಜೋಸೆಫ್ ಥಿಯೋಡರ್‍ರವರು ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕವನ್ನು ವಿತರಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಬಿ. ಪಿ. ದಿವಾಕರ್, ಶ್ರೀ ಗೋಪಾಲ್ ಎಮ್, ಹಾಗೂ ಕುದ್ರೋಳಿ ಯುವಕ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು. ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್‍ರವರು ಸ್ವಾಗತಿಸಿದರು. ಸಂಘದ ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಕಾರ್ಯಕ್ರಮ […]

69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಇದರ ಪ್ರಯುಕ್ತ ದಿನಾಂಕ 18.11.2022 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು,ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿಕರ್ನಾಟಕ ರಾಜ್ಯಸರ್ಕಾರ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತವi ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ವಿಶೇಷ ಸಾಲ ಮೇಳ ಯೋಜನೆಗೆ ಚಾಲನೆ ನೀಡಲಾಯಿತು.

ಈ ಸಾಲ ಯೋಜನೆಯ ಪ್ರಯುಕ್ತ ಮೈಕ್ರೋ ಸಾಲವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಸದಸ್ಯರಾದ ಶ್ರೀಮತಿ ಶಾಲಿ, ಶ್ರೀಮತಿ ಶಕುಂತಲ ಹಾಗೂ ಶ್ರೀಮತಿ ನಂದಿನಿರವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ನೀರುಮಾರ್ಗ ಶಾಖೆಯ ಶಾಖಾಧಿಕಾರಿ ಶ್ರೀ ಸಂದೀಪ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಕುದ್ರೋಳಿ ಯುವಕ ಸಂಘ (ರಿ.) ಇವರ ಜಂಟಿ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ದೇರಳಕಟ್ಟೆ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಕುದ್ರೋಳಿ ಯುವಕ ಸಂಘ (ರಿ.) ಕುದ್ರೋಳಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುದ್ರೋಳಿ ಯುವಕ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೆ. ಹಾಗೂ ಸಂಘದ ಪಧಾದಿಕಾರಿಗಳನ್ನು ಆತ್ಮಶಕ್ತಿ ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಜಸ್ಟಿಸ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಕುದ್ರೋಳಿ ಯುವಕ ಸಂಘ (ರಿ.) ಇವರ ಜಂಟಿ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ದೇರಳಕಟ್ಟೆ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಕುದ್ರೋಳಿ ಯುವಕ ಸಂಘ (ರಿ.) ಕುದ್ರೋಳಿಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ| ಬಿ.ಜಿ.ಸುವರ್ಣರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ ಕೂಡ ಹೆಚ್ಚಿನ ಮಹತ್ವ ನೀಡುತ್ತಿದ್ದು ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಸಂಘ ದ ಗ್ರಾಹಕರಾದ ಶ್ರೀಯುತ ಬಿ ರಾಜರಾಮ್ ಸೋಮಾಯಾಜಿ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಸಂಘದ ಅಧ್ಯಕ್ಷರು ಮಾತನಾಡಿ 10 ವರ್ಷದ ಮೊದಲು ಇ-ಸ್ಟಾಂಪಿಂಗ್ ಗಾಗಿ ಆರಂಭವಾದ ಈ ಶಾಖೆಯು ಈಗ ಬ್ಯಾಂಕಿಂಗ್ ಸೇವೆಯಲ್ಲೂ ಅಗ್ರಸ್ಥಾನಿ ಯಾಗಿ ಹೊರಹೊಮ್ಮಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಶಾಖೆ ಯನ್ನು ತೆರೆಯುವ ಉದ್ದೇಶದೊಂದಿಗೆ , ಬ್ಯಾಂಕಿಂಗ್ ಸೇವೆಯನ್ನು ಆಧುನೀಕರಣಗೊಳಿಸುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಸಂಘದ ಸರ್ವತೋಮುಖ ಅಭಿವೃದ್ದಿಗೆ ಸಹಕರಿಸಿದ ಸಂಘದ ಆಡಳಿತ ಮಂಡಳಿ, ಹಾಗೂ ಸಿಬ್ಬಂದಿ ವರ್ಗವನ್ನು ಪ್ರಶಂಶಿಸಿದರು. ಸಂಘದ ಗ್ರಾಹಕರಾದ ಶ್ರೀಯುತ ಗಿರಿಯಪ್ಪ ಕುಲಾಯಿ ಇವರು ಇ-ಸ್ಟಾಂಪಿಂಗ್ ವಿತರಣೆಯಲ್ಲಿ ಸಂಘದ ಸಾಧನೆಯನ್ನು ಶ್ಲಾಘಿಸಿದರು. ಹಾಗೂ ಸದಸ್ಯರಾದ […]

ಎಸ್. ಪಿ. ವೈ.ಎಸ್. ಎಸ್. – ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಹಾಗೂ ಆತ್ಮ ಶಕ್ತಿ ವಿವಿದೋದ್ದೇಶ ಸಹಕಾರಿ ಸಂಘ ಪಡೀಲ್, ಮಂಗಳೂರು ಇದರ ಸಹಯೋಗದೊಂದಿಗೆ , ನಗರದ ಪಡೀಲ್ ನ ಆತ್ಮ ಶಕ್ತಿ ಸೌಧದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಹಿರಿಯ ಶಿಕ್ಷಕರಾದ ಶ್ರೀಮತಿ ಪ್ರಸೀತ ಪ್ರದೀಪ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನೇತ್ರಾವತಿ ವಲಯ ಸಂಯೋಜಕರಾದ ಶ್ರೀಯುತ ಅಶೋಕ ಕುಮಾರ್ ಜೈನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಆತ್ಮ ಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ತರಗತಿಯನ್ನು ಉದ್ಘಾಟಿಸಿದರು. ಕಂಕನಾಡಿ ನಗರದ ಸಂಚಾಲಕರಾದ ಈಶ್ವರ್ ಎನ್ ಕೊಟ್ಟಾರಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಶ್ರೀಮತಿ ಮೋಹಿನಿಯವರು ಸ್ವಾಗತಿಸಿದರು. ಶ್ರೀಮತಿ ಲತಾ ಎಸ್ ಹೆಗ್ಡೆಯವರು ನಿರೂಪಣೆ ಮಾಡಿದರು, ಕಂಕನಾಡಿ ನಗರದ ಯೋಗಬಂಧುಗಳು ತಮ್ಮ […]