News & Events

Athmashakthi Multi purpose Co-operative Society LTD

ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು.
02Apr

ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು.    ಸಂಘದ ಸದಸ್ಯರಾದ ಶ್ರೀ ಚಂದಪ್ಪ ಕುಂದರ್ ಹಾಗೂ ಶ್ರೀ ಪ್ರದೀಪ್ ಕುಮಾರ್ ಸುವರ್ಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಚುರುಕುತನ ಹಾಗೂ ಸಿಬ್ಬಂದಿಗಳ ನಗುಮೊಗದ ಸೇವೆಯಿಂದಾಗಿ ಅತೀ ಹೆಚ್ಚಿನ ವ್ಯವಹಾರ ಹೊಂದಲು ಕಾರಣವೆಂದು ಶ್ಲಾಘಿಸಿದರು. ಸಂಘವು ಅತೀ ಕಿರು ಅವಧಿಯಲ್ಲಿ ಸ್ವಂತ ಕಟ್ಟಡ ಹೊಂದಿ ಸಹಕಾರ ರಂಗದಲ್ಲಿಯೇ ಅತೀ ಉತ್ತಮ ಸ್ಥಾನ ಗಳಿಸಿದೆ. ಸಂಘದಲ್ಲಿ ಸದಸ್ಯರು ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ್ದಲ್ಲಿಮಾತ್ರ ಲಾಭ ಗಳಿಸಲು ಸಾಧ್ಯವಿದೆ ಎಂದರು.
02Apr

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಶ್ರೀ ಚಂದಪ್ಪ ಕುಂದರ್ ಹಾಗೂ ಶ್ರೀ ಪ್ರದೀಪ್ ಕುಮಾರ್ ಸುವರ್ಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಚುರುಕುತನ ಹಾಗೂ ಸಿಬ್ಬಂದಿಗಳ ನಗುಮೊಗದ ಸೇವೆಯಿಂದಾಗಿ ಅತೀ ಹೆಚ್ಚಿನ ವ್ಯವಹಾರ ಹೊಂದಲು ಕಾರಣವೆಂದು ಶ್ಲಾಘಿಸಿದರು. ಸಂಘವು ಅತೀ ಕಿರು ಅವಧಿಯಲ್ಲಿ ಸ್ವಂತ ಕಟ್ಟಡ ಹೊಂದಿ ಸಹಕಾರ ರಂಗದಲ್ಲಿಯೇ ಅತೀ ಉತ್ತಮ ಸ್ಥಾನ ಗಳಿಸಿದೆ. ಸಂಘದಲ್ಲಿ ಸದಸ್ಯರು ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ್ದಲ್ಲಿಮಾತ್ರ ಲಾಭ ಗಳಿಸಲು ಸಾಧ್ಯವಿದೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ, ರೋಟರಿ ಕ್ಲಬ್ ಬೆಳ್ತಂಗಡಿ  ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಶ್ರೀಗುರು ಸಭಾಭವನ , ಅಳದಂಗಡಿ  ಇಲ್ಲಿ ನಡೆಸಲಾಯಿತು.
02Apr

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಶ್ರೀಗುರು ಸಭಾಭವನ , ಅಳದಂಗಡಿ ಇಲ್ಲಿ ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್‌ವ್ಹೀಲ್ ಕ್ಲಬ್  ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪೆತ್ರೆ , ದೇರಳಕಟ್ಟೆ ಇವರ ನುರಿತ ವೈದರ ತಂಡದವರಿAದ  ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ ಹಾಗೂ ಭಾರತಿಯ ಅಂಚೆ ಇಲಾಖೆ- ಪುತ್ತೂರು ವಿಭಾಗದಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಪುತ್ತೂರಿನ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಸಭಾಂಗಣದಲ್ಲಿ ನಡೆಸಲಾಯಿತು.
31Mar

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್‌ವ್ಹೀಲ್ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪೆತ್ರೆ , ದೇರಳಕಟ್ಟೆ ಇವರ ನುರಿತ ವೈದರ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ ಹಾಗೂ ಭಾರತಿಯ ಅಂಚೆ ಇಲಾಖೆ- ಪುತ್ತೂರು ವಿಭಾಗದಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಪುತ್ತೂರಿನ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಸಭಾಂಗಣದಲ್ಲಿ ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಸ್ಥಾಪನಾ ದಿನಾಚರಣೆ ಪ್ರಯುಕ್ತ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ ಹಾಗೂ ಶ್ರೀನಿವಾಸ ಇನ್ಸ್ಟ್ಯೂಟ್ ಆಫ್ ಡೆಂಟಲ್ ಸಾಯನ್ಸ್, ಮುಕ್ಕ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಸಿ.ಎಸ್.ಸಿ ಮಂಗಳೂರು ಇದರ ವತಿಯಿಂದ  ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.
31Mar

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಸ್ಥಾಪನಾ ದಿನಾಚರಣೆ ಪ್ರಯುಕ್ತ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ ಹಾಗೂ ಶ್ರೀನಿವಾಸ ಇನ್ಸ್ಟ್ಯೂಟ್ ಆಫ್ ಡೆಂಟಲ್ ಸಾಯನ್ಸ್, ಮುಕ್ಕ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಸಿ.ಎಸ್.ಸಿ ಮಂಗಳೂರು ಇದರ ವತಿಯಿಂದ ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಥಾಪನಾ ದಿನಾಚರಣೆ, ಹವಾ ನಿಯಂತ್ರಿತ ಸಭಾಂಗಣ ಮತ್ತು ನೂತನ ಸೌರ ವಿದ್ಯುತ್ ಘಟಕ ಉದ್ಘಾಟನಾ ಸಮಾರಂಭವು ‘ಆತ್ಮಶಕ್ತಿ ಸೌಧ’ ಸಭಾಂಗಣ, ಪಡೀಲ್‌ನಲ್ಲಿ ಜರುಗಿತು.  ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಮಾನಾಥ್ ರೈರವರು ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಹೆಚ್ಚಿನ ಸಹಕಾರಿ ಸಂಘಗಳು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ ಹಾಗೂ ರಾಷ್ಟೀಕೃತ ಬ್ಯಾಂಕುಗಳು ನೀಡುವ ಸೇವೆಗಿಂತ ಹೆಚ್ಚಿನ ಸೇವೆಯನ್ನು ನೀಡುತ್ತಿದೆ. ಅಲ್ಪವಧಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಯು ಅಪಾರವಾದದ್ದು, ಈ ಸಂಘವು ಮಹಿಳಾ ಸಬಲೀಕರಣಕ್ಕೆ ತುಂಬಾ ಒತ್ತು ನೀಡುತ್ತಿದೆ ಹಾಗೂ ಜನರ ವಿಶ್ವಾಸ ಗಳಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
31Mar

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಥಾಪನಾ ದಿನಾಚರಣೆ, ಹವಾ ನಿಯಂತ್ರಿತ ಸಭಾಂಗಣ ಮತ್ತು ನೂತನ ಸೌರ ವಿದ್ಯುತ್ ಘಟಕ ಉದ್ಘಾಟನಾ ಸಮಾರಂಭವು ‘ಆತ್ಮಶಕ್ತಿ ಸೌಧ’ ಸಭಾಂಗಣ, ಪಡೀಲ್‌ನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಮಾನಾಥ್ ರೈರವರು ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಹೆಚ್ಚಿನ ಸಹಕಾರಿ ಸಂಘಗಳು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ ಹಾಗೂ ರಾಷ್ಟೀಕೃತ ಬ್ಯಾಂಕುಗಳು ನೀಡುವ ಸೇವೆಗಿಂತ ಹೆಚ್ಚಿನ ಸೇವೆಯನ್ನು ನೀಡುತ್ತಿದೆ. ಅಲ್ಪವಧಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಯು ಅಪಾರವಾದದ್ದು, ಈ ಸಂಘವು ಮಹಿಳಾ ಸಬಲೀಕರಣಕ್ಕೆ ತುಂಬಾ ಒತ್ತು ನೀಡುತ್ತಿದೆ ಹಾಗೂ ಜನರ ವಿಶ್ವಾಸ ಗಳಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.